ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್ದೇವ್ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.
ಜನರ ದಾರಿ ತಪ್ಪಿಸುವ ಜಾಹೀರಾತು ಸಂಬಂಧ ಪತ್ರಿಕೆಗಳಲ್ಲಿ ಅದೇ ರೀತಿಯಲ್ಲೇ ಕ್ಷಮಾಪಣೆ ಕೇಳಿ ಎಂದು ಸುಪ್ರೀಕೋರ್ಟ್ ಪತಂಜಲಿ ಸಂಸ್ಥೆಗೆ ಸೂಚಿಸಿತ್ತು. ಆದೆರ ಪತಂಜಲಿ ಸಂಸ್ಥೆ ಸಣ್ಣ ಪೋಸ್ಟ್ ಕಾರ್ಡ್ ಸೈಜ್ನಲ್ಲಿ ಕ್ಷಮಾಪಣೆ ಕೇಳಿತ್ತು. ಇದು ಕೋರ್ಟ್ ಗಮನಕ್ಕೆ ಬರುತ್ತಿದ್ದಂತೆ ಗರಂ ಆದ ನ್ಯಾಯಧೀಶರು ನಿಮ್ಮ ಕಂಪನಿಯ ಉತ್ಪನ್ನಗಳ ಜಾಹೀರಾತಿನಂತೆ ಪೂರ್ಣ ಪುಟದಲ್ಲಿ ದೊಡ್ಡ ಅಕ್ಷರಗಳಲ್ಲಿ ಕ್ಷಮಾಪಣೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದಿಯೇ ಎಂದು ಖಾರವಾಗಿ ಪ್ರಶ್ನಿಸಿದರು.
ಕೇವಲ ಕಾಟಾಚಾರಕ್ಕೆ ಚಿಕ್ಕ ಅಕ್ಷರಗಳಲ್ಲಿ ಕ್ಷಮಾಪಣೆ ಜಾಹೀರಾತು ನೀಡಿದರೆ ಸಾಲದು, ಕ್ಷಮೆಯಾಚನೆ ದೊಡ್ಡ ಗಾತ್ರದಲ್ಲಿ ಇರಬೇಕು ಎಂದು ಪೀಠವು ಹೇಳಿತ್ತು. ಜಾಹೀರಾತು ಗಾತ್ರ ಪರಿಶೀಲಿಸಲು ಮುದ್ರಿತ ಕ್ಷಮೆಯಾಚನೆ ಪ್ರತಿಗಳನ್ನು ಕೋರ್ಟ್ಗೆ ಸಲ್ಲಿಸಬೇಕು ಎಂದು ಪೀಠವು ಪತಂಜಲಿ ಸಂಸ್ಥೆಗೆ ನಿರ್ದೇಶಿಸಿತು.
ಈ ಬೆನ್ನಲ್ಲೇ ಪತಂಜಲಿ ಸಂಸ್ಥೆ ಇಂದು(ಏ.24) ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲೇ ಕ್ಷಮಾಪಣೆ ಕೇಳಿ ಸುಪ್ರೀಂಕೋರ್ಟ್ ಆದೇಶ ಪಾಲಿಸಿದೆ.
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…