ದೇಶ- ವಿದೇಶ

ಸುಪ್ರೀಂ ಸೂಚನೆಯಂತೆ ಕ್ಷಮಾಪಣೆ ಪ್ರಕಟಿಸಿದ ಪತಂಜಲಿ!

ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್‌ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.

ಜನರ ದಾರಿ ತಪ್ಪಿಸುವ ಜಾಹೀರಾತು ಸಂಬಂಧ ಪತ್ರಿಕೆಗಳಲ್ಲಿ ಅದೇ ರೀತಿಯಲ್ಲೇ ಕ್ಷಮಾಪಣೆ ಕೇಳಿ ಎಂದು ಸುಪ್ರೀಕೋರ್ಟ್‌ ಪತಂಜಲಿ ಸಂಸ್ಥೆಗೆ ಸೂಚಿಸಿತ್ತು. ಆದೆರ ಪತಂಜಲಿ ಸಂಸ್ಥೆ ಸಣ್ಣ ಪೋಸ್ಟ್‌ ಕಾರ್ಡ್‌ ಸೈಜ್‌ನಲ್ಲಿ ಕ್ಷಮಾಪಣೆ ಕೇಳಿತ್ತು. ಇದು ಕೋರ್ಟ್‌ ಗಮನಕ್ಕೆ ಬರುತ್ತಿದ್ದಂತೆ ಗರಂ ಆದ ನ್ಯಾಯಧೀಶರು ನಿಮ್ಮ ಕಂಪನಿಯ ಉತ್ಪನ್ನಗಳ ಜಾಹೀರಾತಿನಂತೆ ಪೂರ್ಣ ಪುಟದಲ್ಲಿ ದೊಡ್ಡ ಅಕ್ಷರಗಳಲ್ಲಿ ಕ್ಷಮಾಪಣೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದಿಯೇ ಎಂದು ಖಾರವಾಗಿ ಪ್ರಶ್ನಿಸಿದರು.

ಕೇವಲ ಕಾಟಾಚಾರಕ್ಕೆ ಚಿಕ್ಕ ಅಕ್ಷರಗಳಲ್ಲಿ ಕ್ಷಮಾಪಣೆ ಜಾಹೀರಾತು ನೀಡಿದರೆ ಸಾಲದು, ಕ್ಷಮೆಯಾಚನೆ ದೊಡ್ಡ ಗಾತ್ರದಲ್ಲಿ ಇರಬೇಕು ಎಂದು ಪೀಠವು ಹೇಳಿತ್ತು. ಜಾಹೀರಾತು ಗಾತ್ರ ಪರಿಶೀಲಿಸಲು ಮುದ್ರಿತ ಕ್ಷಮೆಯಾಚನೆ ಪ್ರತಿಗಳನ್ನು ಕೋರ್ಟ್ಗೆ ಸಲ್ಲಿಸಬೇಕು ಎಂದು ಪೀಠವು ಪತಂಜಲಿ ಸಂಸ್ಥೆಗೆ ನಿರ್ದೇಶಿಸಿತು.

ಈ ಬೆನ್ನಲ್ಲೇ ಪತಂಜಲಿ ಸಂಸ್ಥೆ ಇಂದು(ಏ.24) ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲೇ ಕ್ಷಮಾಪಣೆ ಕೇಳಿ ಸುಪ್ರೀಂಕೋರ್ಟ್‌ ಆದೇಶ ಪಾಲಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

1 hour ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

2 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

2 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

2 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

3 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

3 hours ago