ದೇಶ- ವಿದೇಶ

ಸುಪ್ರೀಂ ಸೂಚನೆಯಂತೆ ಕ್ಷಮಾಪಣೆ ಪ್ರಕಟಿಸಿದ ಪತಂಜಲಿ!

ಹೊಸದಿಲ್ಲಿ: ಗ್ರಾಹಕರ ದಾರಿ ತಪ್ಪಿಸುವ ರೀತಿ ಜಾಹೀರಾತು ಪ್ರಕಟ ಮಾಡಿದ್ದ ಪತಂಜಲಿ ಸಂಸ್ಥೆ ವಿರುದ್ಧ ಹರಿಹಾಯ್ದಿರುವ ಸುಪ್ರೀಂಕೋರ್ಟ್‌ ಮಂಗಳವಾರ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಯೋಗ ಗುರು ಬಾಬಾ ರಾಮ್‌ದೇವ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದೆ.

ಜನರ ದಾರಿ ತಪ್ಪಿಸುವ ಜಾಹೀರಾತು ಸಂಬಂಧ ಪತ್ರಿಕೆಗಳಲ್ಲಿ ಅದೇ ರೀತಿಯಲ್ಲೇ ಕ್ಷಮಾಪಣೆ ಕೇಳಿ ಎಂದು ಸುಪ್ರೀಕೋರ್ಟ್‌ ಪತಂಜಲಿ ಸಂಸ್ಥೆಗೆ ಸೂಚಿಸಿತ್ತು. ಆದೆರ ಪತಂಜಲಿ ಸಂಸ್ಥೆ ಸಣ್ಣ ಪೋಸ್ಟ್‌ ಕಾರ್ಡ್‌ ಸೈಜ್‌ನಲ್ಲಿ ಕ್ಷಮಾಪಣೆ ಕೇಳಿತ್ತು. ಇದು ಕೋರ್ಟ್‌ ಗಮನಕ್ಕೆ ಬರುತ್ತಿದ್ದಂತೆ ಗರಂ ಆದ ನ್ಯಾಯಧೀಶರು ನಿಮ್ಮ ಕಂಪನಿಯ ಉತ್ಪನ್ನಗಳ ಜಾಹೀರಾತಿನಂತೆ ಪೂರ್ಣ ಪುಟದಲ್ಲಿ ದೊಡ್ಡ ಅಕ್ಷರಗಳಲ್ಲಿ ಕ್ಷಮಾಪಣೆಯನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗಿದಿಯೇ ಎಂದು ಖಾರವಾಗಿ ಪ್ರಶ್ನಿಸಿದರು.

ಕೇವಲ ಕಾಟಾಚಾರಕ್ಕೆ ಚಿಕ್ಕ ಅಕ್ಷರಗಳಲ್ಲಿ ಕ್ಷಮಾಪಣೆ ಜಾಹೀರಾತು ನೀಡಿದರೆ ಸಾಲದು, ಕ್ಷಮೆಯಾಚನೆ ದೊಡ್ಡ ಗಾತ್ರದಲ್ಲಿ ಇರಬೇಕು ಎಂದು ಪೀಠವು ಹೇಳಿತ್ತು. ಜಾಹೀರಾತು ಗಾತ್ರ ಪರಿಶೀಲಿಸಲು ಮುದ್ರಿತ ಕ್ಷಮೆಯಾಚನೆ ಪ್ರತಿಗಳನ್ನು ಕೋರ್ಟ್ಗೆ ಸಲ್ಲಿಸಬೇಕು ಎಂದು ಪೀಠವು ಪತಂಜಲಿ ಸಂಸ್ಥೆಗೆ ನಿರ್ದೇಶಿಸಿತು.

ಈ ಬೆನ್ನಲ್ಲೇ ಪತಂಜಲಿ ಸಂಸ್ಥೆ ಇಂದು(ಏ.24) ಪತ್ರಿಕೆಗಳಲ್ಲಿ ದೊಡ್ಡ ಗಾತ್ರದಲ್ಲೇ ಕ್ಷಮಾಪಣೆ ಕೇಳಿ ಸುಪ್ರೀಂಕೋರ್ಟ್‌ ಆದೇಶ ಪಾಲಿಸಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago