ದೇಶ- ವಿದೇಶ

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು ಹೊಸ ಸುತ್ತಿನ ಮಾತುಕತೆಗಳನ್ನು ನಡೆಸಲು ಪ್ರಯತ್ನಿಸಬಹುದು ಎನ್ನಲಾಗಿದೆ.

ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ ಮುಖಾಮುಖಿ ಮಾತುಕತೆಗಳನ್ನು ಪುನರಾರಂಭಿಸಲು ಮುಕ್ತರಾಗಿದ್ದಾರೆ. ಆದರೆ, ಇರಾನ್ ಅಮೆರಿಕದ ಬೇಡಿಕೆಗಳಿಗೆ ಮಣಿಯಲು ಸಿದ್ಧವಾಗಿದೆ ಎಂದು ಅವರು ಭಾವಿಸಿದರೆ ಮಾತ್ರ ಎಂದಿದೆ.

ಏಪ್ರಿಲ್ 21 ರಂದು ಕದನ ವಿರಾಮ ಮುಕ್ತಾಯಗೊಳ್ಳುವ ಮೊದಲು ಪಶ್ಚಿಮ ಏಷ್ಯಾದಲ್ಲಿನ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಒಪ್ಪಂದಕ್ಕೆ ಬರಲು ವಾಷಿಂಗ್ಟನ್ ಮತ್ತು ಟೆಹರಾನ್ ಹೊಸ ಮಾತುಕತೆಗಳನ್ನು ನಡೆಸಲು ಎದುರು ನೋಡುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿವೆ.

ಅಮೆರಿಕ ಮತ್ತು ಇರಾನ್ ನಡುವೆ ಹೊಸ ಸುತ್ತಿನ ಮಾತುಕತೆ ಏರ್ಪಡಿಸುವ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ ಎಂದು ಕೆಲವು ಅಮೆರಿಕನ್ ಮೂಲಗಳು ತಿಳಿಸಿವೆ. ಆದರೆ ಮಧ್ಯಸ್ಥಿಕೆ ವಹಿಸುತ್ತಿರುವ ದೇಶದ ರಾಜತಾಂತ್ರಿಕರೊಬ್ಬರು ಎರಡೂ ಕಡೆಯವರು ಈಗಾಗಲೇ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಅದೇ ಮಟ್ಟದ ನಿಯೋಗವು ಸಭೆಗೆ ಹಾಜರಾಗುವ ನಿರೀಕ್ಷೆಯಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ರಾಜತಾಂತ್ರಿಕ ಮತ್ತು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ವರದಿ ಪ್ರಕಾರ, ಇಸ್ಲಾಮಾಬಾದ್ ಮತ್ತು ಜಿನೀವಾ ಹೊಸ ಸುತ್ತಿನ ಮಾತುಕತೆಗಾಗಿ ನೋಡುತ್ತಿರುವ ಸಂಭಾವ್ಯ ಸ್ಥಳಗಳಾಗಿವೆ.

ಮಾತುಕತೆ ನಡೆಯುವ ಸ್ಥಳ ಮತ್ತು ಸಮಯವನ್ನು ನಿರ್ಧರಿಸಿಲ್ಲ. ಆದರೆ, ಮಾತುಕತೆ ಗುರುವಾರ ನಡೆಯಬಹುದು ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago