ದೇಶ- ವಿದೇಶ

ಕಳೆದು ಹೋಗಿದ್ದ 4ನೇ ಶತಮಾನದ ಮುತ್ತಿನ ನಗರಿ ಪತ್ತೆ

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ.

ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಾದ ಉಮ್-ಅಲ್-ಕ್ವಿನ್‌ ಪ್ರಕಾರ ಪುರಾತನ ಕಾಲದ ಕಟ್ಟಡಗಳನ್ನು ನಗರದಲ್ಲಿ ಶಾಸ್ತ್ರಜ್ಞರು ಪತ್ತೆಹಚ್ಚಿದ್ದು, ಇದು ತುವಾಯ್‌ನ ಐತಿಹಾಸಿಕ ನಗರದ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ತುವಾಯ್‌ ನಗರವು ಐತಿಹಾಸಿಕವಾಗಿ ದಾಖಲಾಗಿದ್ದರೂ ಸ್ಥಳದ ಬಗ್ಗೆ ಈ ಹಿಂದೆ ಮಾಹಿತಿ ಇರಲಿಲ್ಲ. ಯುಎಇಯಲ್ಲಿ ಈ ಕಟ್ಟಡಗಳು ಹಂಚಿಹೋಗಿರಲೂಬಹುದು ಎಂದು ಸಂಶೋಧಕರು ತಿಳಿಸಿದ್ದು, ಸಿನಿಯಾಹ್‌ ದ್ವೀಪದಲ್ಲಿನ ಇತ್ತೀಚಿನ ದ್ವೀಪದಲ್ಲಿನ ಉತ್ಖನನಗಳು ಹಿಂದಿನ ಊಹೆಗಳನ್ನು ತಳ್ಳಿಹಾಕು ಮೂಲಕ ಇದು ನಿಜವಾಗಿಯೂ ತುವಾಯ್‌ನ ಸ್ಥಳವಾಗಿರಬಹುದು ಎಂಬುದಕ್ಕೆ ಬಲವಾದ ಪುರಾವೆಗಳನ್ನು ಒದಗಿಸುತ್ತದೆ.

ಉಮ್-ಅಲ್-ಕ್ವಿನ್‌ನಲ್ಲಿ ಇಟಾಲಿಯನ್‌ ಪುರಾತತ್ವ ಮಿಷನ್‌ ಮುನ್ನಡೆಸುವ ಮತ್ತು ಪೊಲೀಸ್‌ ಅಕಾಡೆಮಿ ಆಫ್‌ ಸೈನ್ಸಸ್‌ನ ಮೈಕೆಲ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ನಿಜವಾಗಿಯೂ ರೋಮಾಂಚನಕಾರಿಯಾಗಿದೆ. ಈ ಸ್ಥಳ ನಂಬಲಾರದಷ್ಟು ಭರವಸೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಮುತ್ತು ಮೀನುಗಾರಿಕೆಗೆ ತುವಾಯ್‌ ಹೆಸರುವಾಸಿಯಾಗಿದೆ. ತುವಾಯ್‌ನ ಇತಿಹಾಸವು ಕನಿಷ್ಠ ನಾಲ್ಕನೇ ಶತಮಾನಕ್ಕೆ ಹಿಂದಿನದಾಗಿದ್ದು, ಆರನೇ ಶತಮಾನದಲ್ಲಿ ನಗರ ತನ್ನ ಉತ್ತುಂಗವನ್ನು ತಲುಪಿ ಅಭಿವೃದ್ಧಿ ಹೊಂದುತ್ತಿರುವ ಮುತ್ತು ಮೀನುಗಾರಿಗೆ ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಪ್ರಾಚೀನ ಗ್ರಂಥಗಳಲ್ಲಿನ ಉಲ್ಲೇಖಗಳು ತುವಾಯ್‌ ಅನ್ನು ಕರಾವಳಿ ಪ್ರದೇಶದ ರಾಜಧಾನಿಯಾಗಿ ಅದರ ಮುತ್ತುಗಳಿಗಾಗಿ ಉಲ್ಲೇಖಿಸಲಾಗಿದೆ.

ಆರನೇ ಶತಮಾನದಲ್ಲಿ ಸಿನಿಯಾಹ್‌ ದ್ವೀಪದಲ್ಲಿ ಇತ್ತೀಚಿನ ಪುರಾತತ್ವ ಶಾಸ್ತ್ರದ ತನಿಖೆಗಳು ಪುರಾತನ ವಸತಿ ಕಟ್ಟಡಗಳನ್ನು ಮಾತ್ರ ಬಹಿರಂಗಪಡಿಸಿಲ್ಲ. ಆದರೆ ಅದೇ ಯುಗದ ಮುತ್ತುಗಳ ಹಳ್ಳಿ ಮತ್ತು ಕ್ರಿಶ್ಚಿಯನ್‌ ಧಾರ್ಮಿಕ ಕೇಂದ್ರಗಳ ಅವಶೇಷಗಳನ್ನು ಬಹಿರಂಗಪಡಿಸಿವೆ. ಇದು ಸ್ಪಷ್ಟವಾಗಿ ಯಾರೂ ಈ ಹಿಂದೆ ಗುರುತಿಸದ ಮಹತ್ವದ ತಾಣವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

4 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago