ದೇಶ- ವಿದೇಶ

ಕಳೆದು ಹೋಗಿದ್ದ 4ನೇ ಶತಮಾನದ ಮುತ್ತಿನ ನಗರಿ ಪತ್ತೆ

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ.

ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಾದ ಉಮ್-ಅಲ್-ಕ್ವಿನ್‌ ಪ್ರಕಾರ ಪುರಾತನ ಕಾಲದ ಕಟ್ಟಡಗಳನ್ನು ನಗರದಲ್ಲಿ ಶಾಸ್ತ್ರಜ್ಞರು ಪತ್ತೆಹಚ್ಚಿದ್ದು, ಇದು ತುವಾಯ್‌ನ ಐತಿಹಾಸಿಕ ನಗರದ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ತುವಾಯ್‌ ನಗರವು ಐತಿಹಾಸಿಕವಾಗಿ ದಾಖಲಾಗಿದ್ದರೂ ಸ್ಥಳದ ಬಗ್ಗೆ ಈ ಹಿಂದೆ ಮಾಹಿತಿ ಇರಲಿಲ್ಲ. ಯುಎಇಯಲ್ಲಿ ಈ ಕಟ್ಟಡಗಳು ಹಂಚಿಹೋಗಿರಲೂಬಹುದು ಎಂದು ಸಂಶೋಧಕರು ತಿಳಿಸಿದ್ದು, ಸಿನಿಯಾಹ್‌ ದ್ವೀಪದಲ್ಲಿನ ಇತ್ತೀಚಿನ ದ್ವೀಪದಲ್ಲಿನ ಉತ್ಖನನಗಳು ಹಿಂದಿನ ಊಹೆಗಳನ್ನು ತಳ್ಳಿಹಾಕು ಮೂಲಕ ಇದು ನಿಜವಾಗಿಯೂ ತುವಾಯ್‌ನ ಸ್ಥಳವಾಗಿರಬಹುದು ಎಂಬುದಕ್ಕೆ ಬಲವಾದ ಪುರಾವೆಗಳನ್ನು ಒದಗಿಸುತ್ತದೆ.

ಉಮ್-ಅಲ್-ಕ್ವಿನ್‌ನಲ್ಲಿ ಇಟಾಲಿಯನ್‌ ಪುರಾತತ್ವ ಮಿಷನ್‌ ಮುನ್ನಡೆಸುವ ಮತ್ತು ಪೊಲೀಸ್‌ ಅಕಾಡೆಮಿ ಆಫ್‌ ಸೈನ್ಸಸ್‌ನ ಮೈಕೆಲ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ನಿಜವಾಗಿಯೂ ರೋಮಾಂಚನಕಾರಿಯಾಗಿದೆ. ಈ ಸ್ಥಳ ನಂಬಲಾರದಷ್ಟು ಭರವಸೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಮುತ್ತು ಮೀನುಗಾರಿಕೆಗೆ ತುವಾಯ್‌ ಹೆಸರುವಾಸಿಯಾಗಿದೆ. ತುವಾಯ್‌ನ ಇತಿಹಾಸವು ಕನಿಷ್ಠ ನಾಲ್ಕನೇ ಶತಮಾನಕ್ಕೆ ಹಿಂದಿನದಾಗಿದ್ದು, ಆರನೇ ಶತಮಾನದಲ್ಲಿ ನಗರ ತನ್ನ ಉತ್ತುಂಗವನ್ನು ತಲುಪಿ ಅಭಿವೃದ್ಧಿ ಹೊಂದುತ್ತಿರುವ ಮುತ್ತು ಮೀನುಗಾರಿಗೆ ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಪ್ರಾಚೀನ ಗ್ರಂಥಗಳಲ್ಲಿನ ಉಲ್ಲೇಖಗಳು ತುವಾಯ್‌ ಅನ್ನು ಕರಾವಳಿ ಪ್ರದೇಶದ ರಾಜಧಾನಿಯಾಗಿ ಅದರ ಮುತ್ತುಗಳಿಗಾಗಿ ಉಲ್ಲೇಖಿಸಲಾಗಿದೆ.

ಆರನೇ ಶತಮಾನದಲ್ಲಿ ಸಿನಿಯಾಹ್‌ ದ್ವೀಪದಲ್ಲಿ ಇತ್ತೀಚಿನ ಪುರಾತತ್ವ ಶಾಸ್ತ್ರದ ತನಿಖೆಗಳು ಪುರಾತನ ವಸತಿ ಕಟ್ಟಡಗಳನ್ನು ಮಾತ್ರ ಬಹಿರಂಗಪಡಿಸಿಲ್ಲ. ಆದರೆ ಅದೇ ಯುಗದ ಮುತ್ತುಗಳ ಹಳ್ಳಿ ಮತ್ತು ಕ್ರಿಶ್ಚಿಯನ್‌ ಧಾರ್ಮಿಕ ಕೇಂದ್ರಗಳ ಅವಶೇಷಗಳನ್ನು ಬಹಿರಂಗಪಡಿಸಿವೆ. ಇದು ಸ್ಪಷ್ಟವಾಗಿ ಯಾರೂ ಈ ಹಿಂದೆ ಗುರುತಿಸದ ಮಹತ್ವದ ತಾಣವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

5 mins ago

ಶಿಥಿಲಾವಸ್ಥೆಯಲ್ಲಿ ‘ದಲಿತ- ಗಾಂಧಿ’ ಶತಮಾನದ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…

9 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

10 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

14 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago