ದೇಶ- ವಿದೇಶ

ಕಳೆದು ಹೋಗಿದ್ದ 4ನೇ ಶತಮಾನದ ಮುತ್ತಿನ ನಗರಿ ಪತ್ತೆ

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ.

ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಾದ ಉಮ್-ಅಲ್-ಕ್ವಿನ್‌ ಪ್ರಕಾರ ಪುರಾತನ ಕಾಲದ ಕಟ್ಟಡಗಳನ್ನು ನಗರದಲ್ಲಿ ಶಾಸ್ತ್ರಜ್ಞರು ಪತ್ತೆಹಚ್ಚಿದ್ದು, ಇದು ತುವಾಯ್‌ನ ಐತಿಹಾಸಿಕ ನಗರದ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ತುವಾಯ್‌ ನಗರವು ಐತಿಹಾಸಿಕವಾಗಿ ದಾಖಲಾಗಿದ್ದರೂ ಸ್ಥಳದ ಬಗ್ಗೆ ಈ ಹಿಂದೆ ಮಾಹಿತಿ ಇರಲಿಲ್ಲ. ಯುಎಇಯಲ್ಲಿ ಈ ಕಟ್ಟಡಗಳು ಹಂಚಿಹೋಗಿರಲೂಬಹುದು ಎಂದು ಸಂಶೋಧಕರು ತಿಳಿಸಿದ್ದು, ಸಿನಿಯಾಹ್‌ ದ್ವೀಪದಲ್ಲಿನ ಇತ್ತೀಚಿನ ದ್ವೀಪದಲ್ಲಿನ ಉತ್ಖನನಗಳು ಹಿಂದಿನ ಊಹೆಗಳನ್ನು ತಳ್ಳಿಹಾಕು ಮೂಲಕ ಇದು ನಿಜವಾಗಿಯೂ ತುವಾಯ್‌ನ ಸ್ಥಳವಾಗಿರಬಹುದು ಎಂಬುದಕ್ಕೆ ಬಲವಾದ ಪುರಾವೆಗಳನ್ನು ಒದಗಿಸುತ್ತದೆ.

ಉಮ್-ಅಲ್-ಕ್ವಿನ್‌ನಲ್ಲಿ ಇಟಾಲಿಯನ್‌ ಪುರಾತತ್ವ ಮಿಷನ್‌ ಮುನ್ನಡೆಸುವ ಮತ್ತು ಪೊಲೀಸ್‌ ಅಕಾಡೆಮಿ ಆಫ್‌ ಸೈನ್ಸಸ್‌ನ ಮೈಕೆಲ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ನಿಜವಾಗಿಯೂ ರೋಮಾಂಚನಕಾರಿಯಾಗಿದೆ. ಈ ಸ್ಥಳ ನಂಬಲಾರದಷ್ಟು ಭರವಸೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಮುತ್ತು ಮೀನುಗಾರಿಕೆಗೆ ತುವಾಯ್‌ ಹೆಸರುವಾಸಿಯಾಗಿದೆ. ತುವಾಯ್‌ನ ಇತಿಹಾಸವು ಕನಿಷ್ಠ ನಾಲ್ಕನೇ ಶತಮಾನಕ್ಕೆ ಹಿಂದಿನದಾಗಿದ್ದು, ಆರನೇ ಶತಮಾನದಲ್ಲಿ ನಗರ ತನ್ನ ಉತ್ತುಂಗವನ್ನು ತಲುಪಿ ಅಭಿವೃದ್ಧಿ ಹೊಂದುತ್ತಿರುವ ಮುತ್ತು ಮೀನುಗಾರಿಗೆ ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಪ್ರಾಚೀನ ಗ್ರಂಥಗಳಲ್ಲಿನ ಉಲ್ಲೇಖಗಳು ತುವಾಯ್‌ ಅನ್ನು ಕರಾವಳಿ ಪ್ರದೇಶದ ರಾಜಧಾನಿಯಾಗಿ ಅದರ ಮುತ್ತುಗಳಿಗಾಗಿ ಉಲ್ಲೇಖಿಸಲಾಗಿದೆ.

ಆರನೇ ಶತಮಾನದಲ್ಲಿ ಸಿನಿಯಾಹ್‌ ದ್ವೀಪದಲ್ಲಿ ಇತ್ತೀಚಿನ ಪುರಾತತ್ವ ಶಾಸ್ತ್ರದ ತನಿಖೆಗಳು ಪುರಾತನ ವಸತಿ ಕಟ್ಟಡಗಳನ್ನು ಮಾತ್ರ ಬಹಿರಂಗಪಡಿಸಿಲ್ಲ. ಆದರೆ ಅದೇ ಯುಗದ ಮುತ್ತುಗಳ ಹಳ್ಳಿ ಮತ್ತು ಕ್ರಿಶ್ಚಿಯನ್‌ ಧಾರ್ಮಿಕ ಕೇಂದ್ರಗಳ ಅವಶೇಷಗಳನ್ನು ಬಹಿರಂಗಪಡಿಸಿವೆ. ಇದು ಸ್ಪಷ್ಟವಾಗಿ ಯಾರೂ ಈ ಹಿಂದೆ ಗುರುತಿಸದ ಮಹತ್ವದ ತಾಣವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

3 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

7 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

8 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

8 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

8 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

9 hours ago