ದೇಶ- ವಿದೇಶ

ಕಳೆದು ಹೋಗಿದ್ದ 4ನೇ ಶತಮಾನದ ಮುತ್ತಿನ ನಗರಿ ಪತ್ತೆ

ನವದೆಹಲಿ: ಪುರಾತನ ಮುತ್ತಿನ ನಗರಿಯೊಂದು ಪತ್ತೆಯಾಗಿರುವುದಾಗಿ ಪುರಾತತ್ವ ಶಾಸ್ತ್ರಜ್ಞರು ತಿಳಿಸಿದ್ದಾರೆ.

ತನ್ನ ಮುತ್ತಿನ ಉದ್ಯಮಕ್ಕೆ ಹಸರುವಾಸಿಯಾಗಿದ್ದ ಪುರಾತನ ನಗರವಾದ ತುವಾಯ್‌ ಅನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಕರಾವಳಿಯಲ್ಲಿ ಪತ್ತೆ ಹಚ್ಚಿರುವುದಾಗಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಹಾಗೂ ಪುರಾತತ್ವ ಇಲಾಖೆಯಾದ ಉಮ್-ಅಲ್-ಕ್ವಿನ್‌ ಪ್ರಕಾರ ಪುರಾತನ ಕಾಲದ ಕಟ್ಟಡಗಳನ್ನು ನಗರದಲ್ಲಿ ಶಾಸ್ತ್ರಜ್ಞರು ಪತ್ತೆಹಚ್ಚಿದ್ದು, ಇದು ತುವಾಯ್‌ನ ಐತಿಹಾಸಿಕ ನಗರದ ಭಾಗವಾಗಿತ್ತು ಎಂದು ತಿಳಿಸಿದ್ದಾರೆ.

ತುವಾಯ್‌ ನಗರವು ಐತಿಹಾಸಿಕವಾಗಿ ದಾಖಲಾಗಿದ್ದರೂ ಸ್ಥಳದ ಬಗ್ಗೆ ಈ ಹಿಂದೆ ಮಾಹಿತಿ ಇರಲಿಲ್ಲ. ಯುಎಇಯಲ್ಲಿ ಈ ಕಟ್ಟಡಗಳು ಹಂಚಿಹೋಗಿರಲೂಬಹುದು ಎಂದು ಸಂಶೋಧಕರು ತಿಳಿಸಿದ್ದು, ಸಿನಿಯಾಹ್‌ ದ್ವೀಪದಲ್ಲಿನ ಇತ್ತೀಚಿನ ದ್ವೀಪದಲ್ಲಿನ ಉತ್ಖನನಗಳು ಹಿಂದಿನ ಊಹೆಗಳನ್ನು ತಳ್ಳಿಹಾಕು ಮೂಲಕ ಇದು ನಿಜವಾಗಿಯೂ ತುವಾಯ್‌ನ ಸ್ಥಳವಾಗಿರಬಹುದು ಎಂಬುದಕ್ಕೆ ಬಲವಾದ ಪುರಾವೆಗಳನ್ನು ಒದಗಿಸುತ್ತದೆ.

ಉಮ್-ಅಲ್-ಕ್ವಿನ್‌ನಲ್ಲಿ ಇಟಾಲಿಯನ್‌ ಪುರಾತತ್ವ ಮಿಷನ್‌ ಮುನ್ನಡೆಸುವ ಮತ್ತು ಪೊಲೀಸ್‌ ಅಕಾಡೆಮಿ ಆಫ್‌ ಸೈನ್ಸಸ್‌ನ ಮೈಕೆಲ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ನಿಜವಾಗಿಯೂ ರೋಮಾಂಚನಕಾರಿಯಾಗಿದೆ. ಈ ಸ್ಥಳ ನಂಬಲಾರದಷ್ಟು ಭರವಸೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.

ಮುತ್ತು ಮೀನುಗಾರಿಕೆಗೆ ತುವಾಯ್‌ ಹೆಸರುವಾಸಿಯಾಗಿದೆ. ತುವಾಯ್‌ನ ಇತಿಹಾಸವು ಕನಿಷ್ಠ ನಾಲ್ಕನೇ ಶತಮಾನಕ್ಕೆ ಹಿಂದಿನದಾಗಿದ್ದು, ಆರನೇ ಶತಮಾನದಲ್ಲಿ ನಗರ ತನ್ನ ಉತ್ತುಂಗವನ್ನು ತಲುಪಿ ಅಭಿವೃದ್ಧಿ ಹೊಂದುತ್ತಿರುವ ಮುತ್ತು ಮೀನುಗಾರಿಗೆ ಉದ್ಯಮಕ್ಕೆ ಹೆಸರುವಾಸಿಯಾಗಿತ್ತು. ಪ್ರಾಚೀನ ಗ್ರಂಥಗಳಲ್ಲಿನ ಉಲ್ಲೇಖಗಳು ತುವಾಯ್‌ ಅನ್ನು ಕರಾವಳಿ ಪ್ರದೇಶದ ರಾಜಧಾನಿಯಾಗಿ ಅದರ ಮುತ್ತುಗಳಿಗಾಗಿ ಉಲ್ಲೇಖಿಸಲಾಗಿದೆ.

ಆರನೇ ಶತಮಾನದಲ್ಲಿ ಸಿನಿಯಾಹ್‌ ದ್ವೀಪದಲ್ಲಿ ಇತ್ತೀಚಿನ ಪುರಾತತ್ವ ಶಾಸ್ತ್ರದ ತನಿಖೆಗಳು ಪುರಾತನ ವಸತಿ ಕಟ್ಟಡಗಳನ್ನು ಮಾತ್ರ ಬಹಿರಂಗಪಡಿಸಿಲ್ಲ. ಆದರೆ ಅದೇ ಯುಗದ ಮುತ್ತುಗಳ ಹಳ್ಳಿ ಮತ್ತು ಕ್ರಿಶ್ಚಿಯನ್‌ ಧಾರ್ಮಿಕ ಕೇಂದ್ರಗಳ ಅವಶೇಷಗಳನ್ನು ಬಹಿರಂಗಪಡಿಸಿವೆ. ಇದು ಸ್ಪಷ್ಟವಾಗಿ ಯಾರೂ ಈ ಹಿಂದೆ ಗುರುತಿಸದ ಮಹತ್ವದ ತಾಣವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago