ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ವೇಳೆ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂಪಾಯಿಗಳ ದಂಡ ವಿಧಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಈ ಕುರಿತು ಇಂದು(ಡಿ.3) ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕ ಹಾಗೂ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ದ್ವಿಸದಸ್ಯ ಪೀಠವೂ ವಿಚಾರಣೆಯನ್ನು ನಡೆಸಿ, ಬಳಿಕ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂ. ದಂಡ ವಿಧಿಸುವಂತೆ ತೀರ್ಪು ಪ್ರಕಟಿಸಿದೆ.
2013ರ ಜನವರಿ ತಿಂಗಳಿನಲ್ಲಿ ಯೋಧ ನಾಯ್ಕ್ ಇಂದರ್ಜೀತ್ ಸಿಂಗ್ ಎಂಬುವವರು ಗಸ್ತು ನಡೆಸುತ್ತಿದ್ದ ವೇಳೆ ತೀವ್ರ ವಿಷಮ ಹವಾಮಾನ ಪರಿಸ್ಥಿತಿಯಲ್ಲಿ ಸಿಲುಕಿ ಹೃದಯ ಸ್ತಂಭನದಿಂದಾಗಿ ಮೃತಪಟ್ಟಿದ್ದರು.
ಸುಪ್ರೀಂಕೋರ್ಟ್ ಆದೇಶವೇನು?
ಮೃತ ಯೋಧನ ಪತ್ನಿ ಪಿಂಚಣಿ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠವೂ ನಿರ್ಧಾರ ಕೈಗೊಳ್ಳುವ ಅಧಿಕಾರಿಗಳು ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟ ಯೋಧನ ಪತ್ನಿಯ ವಿಚಾರದಲ್ಲಿ ಸಹಾನುಭೂತಿ ಹೊಂದಿರಬೇಕಿತ್ತು. ಈ ಕಾರಣವಾಗಿ ನಮ್ಮ ಪೀಠವೂ ಕೇಂದ್ರ ಸರ್ಕಾರಕ್ಕೆ 50 ಸಾವಿರ ದಂಡ ವಿಧಿಸುತ್ತಿದೆ. ಹೀಗಾಗಿ ಈ ಮೊತ್ತವನ್ನು ಇನ್ನೆರಡು ತಿಂಗಳುಗಳಲ್ಲಿ ಯೋಧನ ಪತ್ನಿಗೆ ಪಾವತಿಸಬೇಕು ಎಂದು ಆದೇಶಿಸಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…