ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಗಸ್ತು ವೇಳೆ ಮೃತಪಟ್ಟ ಯೋಧರೊಬ್ಬರ ಪತ್ನಿಗೆ ಪಿಂಚಣಿ ನೀಡುವಂತೆ ಸಶಸ್ತ್ರ ಪಡೆಗಳ ನ್ಯಾಯಮಂಡಳಿ ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂಪಾಯಿಗಳ ದಂಡ ವಿಧಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ಈ ಕುರಿತು ಇಂದು(ಡಿ.3) ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕ ಹಾಗೂ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ದ್ವಿಸದಸ್ಯ ಪೀಠವೂ ವಿಚಾರಣೆಯನ್ನು ನಡೆಸಿ, ಬಳಿಕ ಕೇಂದ್ರ ಸರ್ಕಾರಕ್ಕೆ 50 ಸಾವಿರ ರೂ. ದಂಡ ವಿಧಿಸುವಂತೆ ತೀರ್ಪು ಪ್ರಕಟಿಸಿದೆ.
2013ರ ಜನವರಿ ತಿಂಗಳಿನಲ್ಲಿ ಯೋಧ ನಾಯ್ಕ್ ಇಂದರ್ಜೀತ್ ಸಿಂಗ್ ಎಂಬುವವರು ಗಸ್ತು ನಡೆಸುತ್ತಿದ್ದ ವೇಳೆ ತೀವ್ರ ವಿಷಮ ಹವಾಮಾನ ಪರಿಸ್ಥಿತಿಯಲ್ಲಿ ಸಿಲುಕಿ ಹೃದಯ ಸ್ತಂಭನದಿಂದಾಗಿ ಮೃತಪಟ್ಟಿದ್ದರು.
ಸುಪ್ರೀಂಕೋರ್ಟ್ ಆದೇಶವೇನು?
ಮೃತ ಯೋಧನ ಪತ್ನಿ ಪಿಂಚಣಿ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠವೂ ನಿರ್ಧಾರ ಕೈಗೊಳ್ಳುವ ಅಧಿಕಾರಿಗಳು ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟ ಯೋಧನ ಪತ್ನಿಯ ವಿಚಾರದಲ್ಲಿ ಸಹಾನುಭೂತಿ ಹೊಂದಿರಬೇಕಿತ್ತು. ಈ ಕಾರಣವಾಗಿ ನಮ್ಮ ಪೀಠವೂ ಕೇಂದ್ರ ಸರ್ಕಾರಕ್ಕೆ 50 ಸಾವಿರ ದಂಡ ವಿಧಿಸುತ್ತಿದೆ. ಹೀಗಾಗಿ ಈ ಮೊತ್ತವನ್ನು ಇನ್ನೆರಡು ತಿಂಗಳುಗಳಲ್ಲಿ ಯೋಧನ ಪತ್ನಿಗೆ ಪಾವತಿಸಬೇಕು ಎಂದು ಆದೇಶಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…