ದೇಶ- ವಿದೇಶ

ದಕ್ಷಿಣ ಭಾರತದ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು: ಆಂಧ್ರ ಸಿಎಂ ಕರೆ

ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನ ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ.

ಯುವಕರ ಸಂಖ್ಯೆ ಕಡಿಮೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಸಿಎಂ, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ.

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ.

2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago