ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೇಂದ್ರ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್ಗೆ 100% ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತದೆ. ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತಿದೆ. ಹೋಟೆಲ್ಗಳಿಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್ ನೀಡಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಸದ್ಯದ ಮಟ್ಟಿಗೆ ಗ್ರಾಹಕರು ಹೆಚ್ಚಾಗಿ ಸಿಲಿಂಡರ್ಗಳನ್ನು ಬುಕ್ ಮಾಡಬಾರದು ಎಂದು ಮನವಿ ಮಾಡಿದರು.





