Kಃ Muniyappa kharge
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಕೇಂದ್ರ ಬಗ್ಗೆ ಗಮನಹರಿಸಬೇಕೆಂದು ಪತ್ರ ಬರೆಯುತ್ತಿದ್ದಾರೆ. ಆಸ್ಪತ್ರೆಗಳು ಶಿಕ್ಷಣ ಸಂಸ್ಥೆಗಳಿಗೆ ರೈಲ್ವೆ ಕ್ಯಾಂಟಿನ್ಗೆ 100% ಕಮರ್ಷಿಯಲ್ ಸಿಲಿಂಡರ್ ಪೂರೈಸುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಿತ್ಯ 44 ಸಾವಿರ ವಾಣಿಜ್ಯ ಸಿಲಿಂಡರ್ ಬೇಕು. ನಮಗೆ 9 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತದೆ. ಈ ಪೈಕಿ 4 ಸಾವಿರ ಆಸ್ಪತ್ರೆಗೆ ಹೋಗುತ್ತಿದೆ. ಹೋಟೆಲ್ಗಳಿಗೆ ನಿತ್ಯ 1000 ಸಿಲಿಂಡರ್ ಪೂರೈಸುತ್ತೇವೆ. ಆಟೋಗಳಿಗೆ 2500 ಗ್ಯಾಸ್ ಸಿಲಿಂಡರ್ ನೀಡಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಸದ್ಯದ ಮಟ್ಟಿಗೆ ಗ್ರಾಹಕರು ಹೆಚ್ಚಾಗಿ ಸಿಲಿಂಡರ್ಗಳನ್ನು ಬುಕ್ ಮಾಡಬಾರದು ಎಂದು ಮನವಿ ಮಾಡಿದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…