ದೇಶ- ವಿದೇಶ

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು; ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಚರ್ಚೆ ನಡೆಸಿದರು.

ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್‌ ಅವರನ್ನು ವಿನಂತಿಸಿದರು.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಅಲ್ಲದೆ, ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ ಅಧಿವೇಶನ ಮುಗಿಯುವದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಅಂತರ ಸಚಿವಾಲಯ ವಿಷಯಗಳ ಕುರಿತು ಸಮಾಲೋಚನೆ: ಈ ಭೇಟಿಯ ಸಂದರ್ಭದಲ್ಲಿ ಸಚಿವದ್ವಯರು ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸಂಬಂಧಿಸಿದ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

8 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

8 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

11 hours ago