ದೇಶ- ವಿದೇಶ

ದೇವಾಲಯಗಳ ಪ್ರಸಾದ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ಕೋರಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ.

ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥನ್‌ ಅವರಿದ್ದ ದ್ವಿಸದಸ್ಯ ಪೀಠವೂ ಅರ್ಜಿಯಲ್ಲಿ ದಾಖಲಿಸಿದ ಮನವಿಯೂ ನೆಲದ ಅಸ್ತಿತ್ವದಲ್ಲಿರುವ ಕಾನೂನಿನ ಅಡಿಯಲ್ಲಿ ಬರುತ್ತದೆ. ಹೀಗಾಗಿ ಪ್ರಸ್ತುತ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಅರ್ಜಿದಾರರು ಬಯಸಿದರೆ ಈ ಅರ್ಜಿಯನ್ನು ಕಾನೂನಿನ ಅಡಿಯಲ್ಲಿ ಬರುವ ನಿಗಧಿತ ಸಂಸ್ಥೆಗೆ ಸಲ್ಲಿಸಬಹುದು ಎಂದು ತೀರ್ಪು ಪ್ರಕಟಿಸಿದೆ.

ಈ ಬಗ್ಗೆ ನವೆಂಬರ್‌ 26 ರಂದು ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಅರ್ಜಿದಾರರು ಈ ಅರ್ಜಿಯನ್ನು ವಿವಿಧ ದೇವಸ್ಥಾನಗಳಲ್ಲಿ ಅನ್ನಪ್ರಸಾದ ಅಥವಾ ಇತರೆ ಪ್ರಸಾದ ಸೇವಿಸಿದ ಬಳಿಕ ಜನರು ಅಸ್ವಸ್ತರಾಗುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

 

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

2 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

3 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

3 hours ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

3 hours ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

6 hours ago