ದೇಶ- ವಿದೇಶ

ದೇವಾಲಯಗಳ ಪ್ರಸಾದ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ಕೋರಿದ್ದ ಅರ್ಜಿ ವಜಾ: ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ದೇವಾಲಯಗಳಲ್ಲಿ ವಿತರಿಸಲಾಗುವ ಪ್ರಸಾದ ಅಥವಾ ಆಹಾರ ಗುಣಮಟ್ಟ ಪರೀಕ್ಷೆಯಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿ, ಈ ಪರೀಕ್ಷೆಯು ಸರ್ಕಾರದ ಕಾರ್ಯವ್ಯಾಪ್ತಿ ಭಾಗವಾಗಿದೆ ಎಂದು ಆದೇಶ ನೀಡಿದೆ.

ಸುಪ್ರೀಂಕೋರ್ಟ್‌ನಲ್ಲಿ ಇಂದು(ನ.29) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥನ್‌ ಅವರಿದ್ದ ದ್ವಿಸದಸ್ಯ ಪೀಠವೂ ಅರ್ಜಿಯಲ್ಲಿ ದಾಖಲಿಸಿದ ಮನವಿಯೂ ನೆಲದ ಅಸ್ತಿತ್ವದಲ್ಲಿರುವ ಕಾನೂನಿನ ಅಡಿಯಲ್ಲಿ ಬರುತ್ತದೆ. ಹೀಗಾಗಿ ಪ್ರಸ್ತುತ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಅರ್ಜಿದಾರರು ಬಯಸಿದರೆ ಈ ಅರ್ಜಿಯನ್ನು ಕಾನೂನಿನ ಅಡಿಯಲ್ಲಿ ಬರುವ ನಿಗಧಿತ ಸಂಸ್ಥೆಗೆ ಸಲ್ಲಿಸಬಹುದು ಎಂದು ತೀರ್ಪು ಪ್ರಕಟಿಸಿದೆ.

ಈ ಬಗ್ಗೆ ನವೆಂಬರ್‌ 26 ರಂದು ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಅರ್ಜಿದಾರರು ಈ ಅರ್ಜಿಯನ್ನು ವಿವಿಧ ದೇವಸ್ಥಾನಗಳಲ್ಲಿ ಅನ್ನಪ್ರಸಾದ ಅಥವಾ ಇತರೆ ಪ್ರಸಾದ ಸೇವಿಸಿದ ಬಳಿಕ ಜನರು ಅಸ್ವಸ್ತರಾಗುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago