ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್ ಕುಮಾರ್ ಅವರು ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ ಎಂದು ವಿವರಣೆ ನೀಡಿದ್ದಾರೆ.
ಅಹಮದಾಬಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಮಾಧ್ಯಮಗಳೊಂದಿಗೆ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಬಳಿಯೂ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದ ವಿಶ್ವಾಸ್ ರಮೇಶ್ ಕುಮಾರ್ ಅವರು, ಬಳಿಕ ಮಾಧ್ಯಮಗಳೊಂದಿಗೆ ವಿವರಣೆ ನೀಡಿದ್ದಾರೆ.
ವಿಮಾನ ಟೇಕಾಫ್ ಆಗುತ್ತಿದ್ದಂತೆ ಏನೋ ಸಮಸ್ಯೆ ಆಗಿದೆ ಎಂದು ಗೊತ್ತಾಯಿತು. ವಿಮಾನದ ಒಳಗೆ ಹಸಿರು, ಬಿಳಿ ಬಣ್ಣದ ಲೈಟ್ ಆನ್ ಆಯ್ತು. ಕೆಲವೇ ಸೆಕೆಂಡ್ನಲ್ಲಿ ವಿಮಾನ ಕಟ್ಟಡಕ್ಕೆ ಡಿಕ್ಕಿಯಾಯ್ತು. ಈ ವೇಳೆ ನಾನು ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನ ಮೂಲಕ ನೆಲೆದ ಮೇಲೆ ಜಂಪ್ ಮಾಡಿದೆ.
ನಾನು ಹೇಗೆ ಬದುಕಿ ಬಂದೇ ಎಂಬುದೇ ನನಗೆ ಆಶ್ಚರ್ಯ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ನನ್ನ ಎಡಗೈ ಕೂಡ ಸುಡಲು ಆರಂಭಿಸಿತು. ಆಗ ನಾನು ಅಲ್ಲಿಂದ ಓಡಿ ಬಂದೆ. ಆಗ ಯಾರೋ ನನ್ನನ್ನು ಎಳೆದು ಆಂಬುಲೆನ್ಸ್ನಲ್ಲಿ ಕೂರಿಸಿದರು ಎಂದು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…