ದೇಶ- ವಿದೇಶ

ಕೆಲ ಕ್ಷಣ ನಾನು ಸತ್ತೇ ಹೋಗಿದ್ದೇನೆ ಅನ್ನಿಸಿತ್ತು: ವಿಮಾನ ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

ಅಹಮದಾಬಾದ್:‌ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್‌ ಪ್ರಜೆ ರಮೇಶ್‌ ವಿಶ್ವಾಸ್‌ ಕುಮಾರ್‌ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್‌ ಕುಮಾರ್‌ ಅವರು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ ಎಂದು ವಿವರಣೆ ನೀಡಿದ್ದಾರೆ.

ಅಹಮದಾಬಾದ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಮಾಧ್ಯಮಗಳೊಂದಿಗೆ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಳಿಯೂ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದ ವಿಶ್ವಾಸ್‌ ರಮೇಶ್‌ ಕುಮಾರ್‌ ಅವರು, ಬಳಿಕ ಮಾಧ್ಯಮಗಳೊಂದಿಗೆ ವಿವರಣೆ ನೀಡಿದ್ದಾರೆ.

ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಏನೋ ಸಮಸ್ಯೆ ಆಗಿದೆ ಎಂದು ಗೊತ್ತಾಯಿತು. ವಿಮಾನದ ಒಳಗೆ ಹಸಿರು, ಬಿಳಿ ಬಣ್ಣದ ಲೈಟ್‌ ಆನ್‌ ಆಯ್ತು. ಕೆಲವೇ ಸೆಕೆಂಡ್‌ನಲ್ಲಿ ವಿಮಾನ ಕಟ್ಟಡಕ್ಕೆ ಡಿಕ್ಕಿಯಾಯ್ತು. ಈ ವೇಳೆ ನಾನು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನ ಮೂಲಕ ನೆಲೆದ ಮೇಲೆ ಜಂಪ್‌ ಮಾಡಿದೆ.

ನಾನು ಹೇಗೆ ಬದುಕಿ ಬಂದೇ ಎಂಬುದೇ ನನಗೆ ಆಶ್ಚರ್ಯ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ನನ್ನ ಎಡಗೈ ಕೂಡ ಸುಡಲು ಆರಂಭಿಸಿತು. ಆಗ ನಾನು ಅಲ್ಲಿಂದ ಓಡಿ ಬಂದೆ. ಆಗ ಯಾರೋ ನನ್ನನ್ನು ಎಳೆದು ಆಂಬುಲೆನ್ಸ್‌ನಲ್ಲಿ ಕೂರಿಸಿದರು ಎಂದು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

25 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

34 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 hour ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago