ದೇಶ- ವಿದೇಶ

ಕೆಲ ಕ್ಷಣ ನಾನು ಸತ್ತೇ ಹೋಗಿದ್ದೇನೆ ಅನ್ನಿಸಿತ್ತು: ವಿಮಾನ ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

ಅಹಮದಾಬಾದ್:‌ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್‌ ಪ್ರಜೆ ರಮೇಶ್‌ ವಿಶ್ವಾಸ್‌ ಕುಮಾರ್‌ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್‌ ಕುಮಾರ್‌ ಅವರು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ ಎಂದು ವಿವರಣೆ ನೀಡಿದ್ದಾರೆ.

ಅಹಮದಾಬಾದ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಮಾಧ್ಯಮಗಳೊಂದಿಗೆ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಳಿಯೂ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದ ವಿಶ್ವಾಸ್‌ ರಮೇಶ್‌ ಕುಮಾರ್‌ ಅವರು, ಬಳಿಕ ಮಾಧ್ಯಮಗಳೊಂದಿಗೆ ವಿವರಣೆ ನೀಡಿದ್ದಾರೆ.

ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಏನೋ ಸಮಸ್ಯೆ ಆಗಿದೆ ಎಂದು ಗೊತ್ತಾಯಿತು. ವಿಮಾನದ ಒಳಗೆ ಹಸಿರು, ಬಿಳಿ ಬಣ್ಣದ ಲೈಟ್‌ ಆನ್‌ ಆಯ್ತು. ಕೆಲವೇ ಸೆಕೆಂಡ್‌ನಲ್ಲಿ ವಿಮಾನ ಕಟ್ಟಡಕ್ಕೆ ಡಿಕ್ಕಿಯಾಯ್ತು. ಈ ವೇಳೆ ನಾನು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನ ಮೂಲಕ ನೆಲೆದ ಮೇಲೆ ಜಂಪ್‌ ಮಾಡಿದೆ.

ನಾನು ಹೇಗೆ ಬದುಕಿ ಬಂದೇ ಎಂಬುದೇ ನನಗೆ ಆಶ್ಚರ್ಯ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ನನ್ನ ಎಡಗೈ ಕೂಡ ಸುಡಲು ಆರಂಭಿಸಿತು. ಆಗ ನಾನು ಅಲ್ಲಿಂದ ಓಡಿ ಬಂದೆ. ಆಗ ಯಾರೋ ನನ್ನನ್ನು ಎಳೆದು ಆಂಬುಲೆನ್ಸ್‌ನಲ್ಲಿ ಕೂರಿಸಿದರು ಎಂದು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

49 mins ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago