ದೇಶ- ವಿದೇಶ

ಕೆಲ ಕ್ಷಣ ನಾನು ಸತ್ತೇ ಹೋಗಿದ್ದೇನೆ ಅನ್ನಿಸಿತ್ತು: ವಿಮಾನ ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

ಅಹಮದಾಬಾದ್:‌ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್‌ ಪ್ರಜೆ ರಮೇಶ್‌ ವಿಶ್ವಾಸ್‌ ಕುಮಾರ್‌ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ವಿಮಾನದಿಂದ ಹಾರಿ ಜೀವ ಉಳಿಸಿಕೊಂಡ ವಿಶ್ವಾಸ್ ರಮೇಶ್‌ ಕುಮಾರ್‌ ಅವರು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ ಎಂದು ವಿವರಣೆ ನೀಡಿದ್ದಾರೆ.

ಅಹಮದಾಬಾದ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಮಾಧ್ಯಮಗಳೊಂದಿಗೆ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಳಿಯೂ ಘಟನೆಯಿಂದ ಪಾರಾದ ಬಗ್ಗೆ ಮಾಹಿತಿ ನೀಡಿದ ವಿಶ್ವಾಸ್‌ ರಮೇಶ್‌ ಕುಮಾರ್‌ ಅವರು, ಬಳಿಕ ಮಾಧ್ಯಮಗಳೊಂದಿಗೆ ವಿವರಣೆ ನೀಡಿದ್ದಾರೆ.

ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಏನೋ ಸಮಸ್ಯೆ ಆಗಿದೆ ಎಂದು ಗೊತ್ತಾಯಿತು. ವಿಮಾನದ ಒಳಗೆ ಹಸಿರು, ಬಿಳಿ ಬಣ್ಣದ ಲೈಟ್‌ ಆನ್‌ ಆಯ್ತು. ಕೆಲವೇ ಸೆಕೆಂಡ್‌ನಲ್ಲಿ ವಿಮಾನ ಕಟ್ಟಡಕ್ಕೆ ಡಿಕ್ಕಿಯಾಯ್ತು. ಈ ವೇಳೆ ನಾನು ಸೀಟ್‌ ಬೆಲ್ಟ್‌ ತೆಗೆದು ಎಮರ್ಜೆನ್ಸಿ ಬಾಗಿಲಿನ ಮೂಲಕ ನೆಲೆದ ಮೇಲೆ ಜಂಪ್‌ ಮಾಡಿದೆ.

ನಾನು ಹೇಗೆ ಬದುಕಿ ಬಂದೇ ಎಂಬುದೇ ನನಗೆ ಆಶ್ಚರ್ಯ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ನನ್ನ ಎಡಗೈ ಕೂಡ ಸುಡಲು ಆರಂಭಿಸಿತು. ಆಗ ನಾನು ಅಲ್ಲಿಂದ ಓಡಿ ಬಂದೆ. ಆಗ ಯಾರೋ ನನ್ನನ್ನು ಎಳೆದು ಆಂಬುಲೆನ್ಸ್‌ನಲ್ಲಿ ಕೂರಿಸಿದರು ಎಂದು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

10 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

10 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

11 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

11 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

11 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

12 hours ago