ದೇಶ- ವಿದೇಶ

ವಿಮಾನ ದುರಂತ : 99 ಮಂದಿ ಗುರುತು ಪತ್ತೆ ; 64 ಮೃತದೇಹ ಹಸ್ತಾಂತರ

ಅಹಮದಾಬಾದ್ : ಇಲ್ಲಿನ ಸರ್ಧರ್‌ ವಲ್ಲಭಾಯಿ ಪಟೇಲ್‌ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತಕ್ಕೀಡಾಗಿ 270 ಜನರನ್ನು ಬಲಿ ತೆಗೆದುಕೊಂಡ ನಾಲ್ಕು ದಿನಗಳ ನಂತರ, ಡಿಎನ್‍ಎ ಹೊಂದಾಣಿಕೆಯ ಮೂಲಕ ಇದುವರೆಗೆ 99 ಸಂತ್ರಸ್ತರನ್ನು ಗುರುತಿಸಲಾಗಿದ್ದು, 64 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ವಿಮಾನ ಅಪಘಾತದ ನಂತರ ಅನೇಕ ದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ. ಅವರ ಗುರುತನ್ನು ಪತ್ತೆಹಚ್ಚಲು ಅಧಿಕಾರಿಗಳು ಡಿಎನ್‍ಎ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೆ 99 ಡಿಎನ್‍ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 64 ದೇಹಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಈ ಮೃತರು ಗುಜರಾತ್‍ನ ವಿವಿಧ ಭಾಗಗಳಾದ ಭರೂಚ್, ಆನಂದ್, ಜುನಾಗಢ, ಭಾವನಗರ, ವಡೋದರಾ, ಖೇಡಾ, ಮೆಹ್ಸಾನಾ, ಅರವಲ್ಲಿ ಮತ್ತು ಅಹಮದಾಬಾದ್ ಜಿಲ್ಲೆಗಳಿಂದ ಬಂದವರು ಎಂದು ಹೆಚ್ಚುವರಿ ಸಿವಿಲ್ ಸೂಪರಿಂಟೆಂಡೆಂಟ್ ಡಾ ರಜನೀಶ್ ಪಟೇಲ್ ಸುದ್ದಿಗಾರರಿಗೆ ತಿಳಿಸಿದರು.

ಜೂನ್ 12 ರಂದು ಮಧ್ಯಾಹ್ನ 1.39ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ 242 ಜನರೊಂದಿಗೆ ಬೋಯಿಂಗ್ 787-8 ಡ್ರೀಮ್‍ಲೈನರ್ ಅಹಮದಾಬಾದ್‍ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.

ಲಂಡನ್‍ಗೆ ತೆರಳುತ್ತಿದ್ದ ವಿಮಾನದಲ್ಲಿದ್ದ 241 ಮಂದಿ ಸಾವನ್ನಪ್ಪಿದ್ದರೆ, ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಅಲ್ಲದೆ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ನೆಲದ ಮೇಲಿನ ದುರಂತದಲ್ಲಿ 29 ಜನರು ಸಾವನ್ನಪ್ಪಿದ್ದರು.

ಆಂದೋಲನ ಡೆಸ್ಕ್

Recent Posts

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

20 mins ago

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

42 mins ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

2 hours ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

2 hours ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

2 hours ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago