plane crash
ಅಹಮದಾಬಾದ್ : ಇಲ್ಲಿನ ಸರ್ಧರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಭೀಕರ ಅಪಘಾತಕ್ಕೀಡಾಗಿ 270 ಜನರನ್ನು ಬಲಿ ತೆಗೆದುಕೊಂಡ ನಾಲ್ಕು ದಿನಗಳ ನಂತರ, ಡಿಎನ್ಎ ಹೊಂದಾಣಿಕೆಯ ಮೂಲಕ ಇದುವರೆಗೆ 99 ಸಂತ್ರಸ್ತರನ್ನು ಗುರುತಿಸಲಾಗಿದ್ದು, 64 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.
ವಿಮಾನ ಅಪಘಾತದ ನಂತರ ಅನೇಕ ದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ. ಅವರ ಗುರುತನ್ನು ಪತ್ತೆಹಚ್ಚಲು ಅಧಿಕಾರಿಗಳು ಡಿಎನ್ಎ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿಯವರೆಗೆ 99 ಡಿಎನ್ಎ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 64 ದೇಹಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಈ ಮೃತರು ಗುಜರಾತ್ನ ವಿವಿಧ ಭಾಗಗಳಾದ ಭರೂಚ್, ಆನಂದ್, ಜುನಾಗಢ, ಭಾವನಗರ, ವಡೋದರಾ, ಖೇಡಾ, ಮೆಹ್ಸಾನಾ, ಅರವಲ್ಲಿ ಮತ್ತು ಅಹಮದಾಬಾದ್ ಜಿಲ್ಲೆಗಳಿಂದ ಬಂದವರು ಎಂದು ಹೆಚ್ಚುವರಿ ಸಿವಿಲ್ ಸೂಪರಿಂಟೆಂಡೆಂಟ್ ಡಾ ರಜನೀಶ್ ಪಟೇಲ್ ಸುದ್ದಿಗಾರರಿಗೆ ತಿಳಿಸಿದರು.
ಜೂನ್ 12 ರಂದು ಮಧ್ಯಾಹ್ನ 1.39ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ 242 ಜನರೊಂದಿಗೆ ಬೋಯಿಂಗ್ 787-8 ಡ್ರೀಮ್ಲೈನರ್ ಅಹಮದಾಬಾದ್ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು.
ಲಂಡನ್ಗೆ ತೆರಳುತ್ತಿದ್ದ ವಿಮಾನದಲ್ಲಿದ್ದ 241 ಮಂದಿ ಸಾವನ್ನಪ್ಪಿದ್ದರೆ, ಓರ್ವ ಪ್ರಯಾಣಿಕ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಅಲ್ಲದೆ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ನೆಲದ ಮೇಲಿನ ದುರಂತದಲ್ಲಿ 29 ಜನರು ಸಾವನ್ನಪ್ಪಿದ್ದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…