ದೇಶ- ವಿದೇಶ

ವಿಮಾನ ದುರಂತ | ಕಾಕ್‌ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆ : ತನಿಖೆಗೆ ನಿರ್ಣಾಯಕ ಪಾತ್ರ

ಅಹಮದಾಬಾದ್‌ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್‌ ವಾಯ್ಸ್‌ ರೆಕಾರ್ಡರ್‌ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ನತದೃಷ್ಟ ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್‍ಡಿಆರ್) ಮಾತ್ರ ಪತ್ತೆಯಾಗಿದೆ ಎಂದು ಖಚಿತಪಡಿಸಿತ್ತು.

ಜೂನ್ 12 ರಂದು ಅಹಮದಾಬಾದ್‍ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳವನ್ನು ಪರಿಶೀಲಿಸಿದ ಮತ್ತು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ ಅವರಿಗೆ ಕಪ್ಪು ಪೆಟ್ಟಿಗೆಗಳು ಪತ್ತೆಯಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಮಿಶ್ರಾ ಅವರು ಇಲ್ಲಿನ ಸಕ್ರ್ಯೂಟ್ ಹೌಸ್‍ನಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎಎಐಬಿ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಯತ್ನಗಳ ಕುರಿತು ಚರ್ಚಿಸಿದರು ಎಂದು ಭಾನುವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

ಎಎಐಬಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದೆ. ಯುಎಸ್ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ಅಂತರರಾಷ್ಟ್ರೀಯ ಪ್ರೋಟೋಕಾಲ್‍ಗಳ ಅಡಿಯಲ್ಲಿ ಸಮಾನಾಂತರ ತನಿಖೆ ನಡೆಸುತ್ತಿದೆ, ಏಕೆಂದರೆ ವಿಮಾನವು ಅಮೇರಿಕನ್ ನಿರ್ಮಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

13 mins ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

27 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

32 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

1 hour ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago