plan crash
ಅಹಮದಾಬಾದ್ : ಇಲ್ಲಿನ ಏರ್ ಇಂಡಿಯಾ ವಿಮಾನ ಅಪಘಾತದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ವಿಮಾನದಲ್ಲಿದ್ದ 241 ಸೇರಿದಂತೆ 270 ಜನರನ್ನು ಬಲಿತೆಗೆದುಕೊಂಡ ಅಪಘಾತದ ಸಂಭವನೀಯ ಕಾರಣವನ್ನು ಕಂಡುಹಿಡಿಯಲು ಇದು ನಿರ್ಣಾಯಕ ಆವಿಷ್ಕಾರವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ನತದೃಷ್ಟ ವಿಮಾನದ ಫ್ಲೈಟ್ ಡೇಟಾ ರೆಕಾರ್ಡರ್ (ಎಫ್ಡಿಆರ್) ಮಾತ್ರ ಪತ್ತೆಯಾಗಿದೆ ಎಂದು ಖಚಿತಪಡಿಸಿತ್ತು.
ಜೂನ್ 12 ರಂದು ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳವನ್ನು ಪರಿಶೀಲಿಸಿದ ಮತ್ತು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ ಅವರಿಗೆ ಕಪ್ಪು ಪೆಟ್ಟಿಗೆಗಳು ಪತ್ತೆಯಾಗಿರುವುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮಿಶ್ರಾ ಅವರು ಇಲ್ಲಿನ ಸಕ್ರ್ಯೂಟ್ ಹೌಸ್ನಲ್ಲಿ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎಎಐಬಿ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಯುತ್ತಿರುವ ಪರಿಹಾರ ಮತ್ತು ತನಿಖಾ ಪ್ರಯತ್ನಗಳ ಕುರಿತು ಚರ್ಚಿಸಿದರು ಎಂದು ಭಾನುವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
ಎಎಐಬಿ ವಿವರವಾದ ತನಿಖೆಯನ್ನು ಪ್ರಾರಂಭಿಸಿದೆ. ಯುಎಸ್ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯು ಅಂತರರಾಷ್ಟ್ರೀಯ ಪ್ರೋಟೋಕಾಲ್ಗಳ ಅಡಿಯಲ್ಲಿ ಸಮಾನಾಂತರ ತನಿಖೆ ನಡೆಸುತ್ತಿದೆ, ಏಕೆಂದರೆ ವಿಮಾನವು ಅಮೇರಿಕನ್ ನಿರ್ಮಿತವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…