Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

ವಿಮಾನ ದುರಂತ : ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್‌ : ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟಿದ್ದ ಗುಜರಾತ್‌ ಮಾಜಿ ಸಿಎಂ ವಿಜಯ ರೂಪಾನಿ ಅವರ ಮೃತದೇಹವನ್ನು ಮೂರು ದಿನಗಳ ಬಳಿಕ ಗುರುತಿಸಲಾಗಿದೆ.

ಈ ಬಗ್ಗೆ ಭಾನುವಾರ ಅಧಿಕಾರಿಗಳು ದೃಢಪಡಿಸಿದ್ದು, ವಿಜಯ್‌ ರೂಪಾಮಿ ಅವರ ಡಿಎನ್‌ಎ ಮಾದರಿ ಅವರ ಕುಟುಂಬದ ಸದಸ್ಯರ ಡಿಎನ್‌ಎ ಮಾದರಿಯೊಂದಿಗೆ ಹೊಂದಿಕೆಯಾಗಿದೆ ಎಂದು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ.

ಜೂನ್‌ 12 ರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿತ್ತು. ದುರಂತದಲ್ಲಿ ರೂಪಾನಿ ಸೇರಿದಂತ 241 ಮಂದಿ ದಾರುಣವಾಗಿ ಮೃತಪಟ್ಟಿದ್ದರು.

Tags:
error: Content is protected !!