ದೇಶ- ವಿದೇಶ

ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 265ಕ್ಕೆ ಏರಿಕೆ

ಅಹಮದಾಬಾದ್:‌ ದೇಶದ ವಿಮಾನಯಾನ ಇತಿಹಾಸದಲ್ಲೇ ಅತೀ ದೊಡ್ಡ ದುರಂತ ಎಂದೇ ಹೇಳಲಾಗಿರುವ ಗುಜರಾತ್‌ನ ಸರ್ದಾರ್ ವಲ್ಲಬಭಾಯಿ ಪಟೇಲ್ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ವಿಮಾನ ಆಪಘಾತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಸಂಖ್ಯೆ 265ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ ಪಾರಾಗಿದ್ದು, ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಮಾನದಲ್ಲಿದ್ದ 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸರು ಮತ್ತು ಒಬ್ಬ ಕೆನಡಾದವರು ಮತ್ತು 12 ಸಿಬ್ಬಂದಿ ಇದ್ದರು.

ಸಾವನ್ನಪ್ಪಿದವರಲ್ಲಿ ಗುಜರಾತ್‍ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು. 1.25 ಲಕ್ಷ ಲೀಟರ್‌ಗಳಿಗೂ ಹೆಚ್ಚು ಜೆಟ್ ಇಂಧನ ಸ್ಫೋಟಗೊಂಡ ಕಾರಣ, ಅಪಘಾತದ ಸ್ಥಳದಲ್ಲಿ ತಾಪಮಾನ 1,000 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಬೆಂಕಿಯ ತೀವ್ರತೆಯಿಂದಾಗಿ “ಯಾರನ್ನೂ ಉಳಿಸುವುದು ಅಸಾಧ್ಯ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಏರ್ ಇಂಡಿಯಾದ ಪೋಷಕ ಕಂಪನಿ ಟಾಟಾ ಗ್ರೂಪ್, ಮೃತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ವೈದ್ಯಕೀಯ ವೆಚ್ಚದ ವ್ಯಾಪ್ತಿ ಮತ್ತು ಹಾನಿಗೊಳಗಾದ ವೈದ್ಯಕೀಯ ಕಾಲೇಜು ಮೂಲಸೌಕರ್ಯವನ್ನು ಪುನರ್‌ ನಿರ್ಮಿಸಲು ಸಹಾಯವನ್ನು ಘೋಷಿಸಿದೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

14 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

15 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

15 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

21 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

21 hours ago