ದೇಶ- ವಿದೇಶ

Plane crash | 825 ಅಡಿ ಎತ್ತರದಿಂದ ಪತನಗೊಂಡ ವಿಮಾನ.!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏರ್‌ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು.

ಪತನವಾದ ಸ್ಥಳವಾದ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್‌ಗಳು ಧಾವಿಸಿವೆ.

ಈ ವಿಮಾನವು ಕ್ಯಾಪ್ಟನ್‌ ಸುಮೀತ್‌ ಸಭರ್ವಾಲ್‌ ಮತ್ತು ಸಹ ಪೈಲೆಟ್‌ ಕ್ಲೈವ್‌ ಕುಂದರ್‌ ಅವರ ನೇತೃತ್ವದಲ್ಲಿತ್ತು ಎಂದು ವಿಮಾನ ಸಂಸ್ಥೆ ಹೇಳಿದೆ.

ಇನ್ನೂ ಘಟನೆ ಕುರಿತು ವಿಮಾನಯಾನ ಸಚಿವ ಆಘಾತ ವ್ಯಕ್ತಪಡಿಸಿದ್ದು, ರಕ್ಷಣೆಗೆ ಕೇಂದ್ರ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿಯೂ ಬಿಡುಗಡೆಯಾಗಿದೆ.

ಏರ್‌ ಇಂಡಿಯಾ ತುರ್ತು ಸಂಖ್ಯೆ ಆರಂಭಿಸಿದ್ದು 1800 5691 444 ನ್ನು ಸಂಪರ್ಕಿಸುವಂತೆ ಕೋರಿದೆ.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

1 hour ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago