ದೇಶ- ವಿದೇಶ

Plane crash | 825 ಅಡಿ ಎತ್ತರದಿಂದ ಪತನಗೊಂಡ ವಿಮಾನ.!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏರ್‌ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು.

ಪತನವಾದ ಸ್ಥಳವಾದ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್‌ಗಳು ಧಾವಿಸಿವೆ.

ಈ ವಿಮಾನವು ಕ್ಯಾಪ್ಟನ್‌ ಸುಮೀತ್‌ ಸಭರ್ವಾಲ್‌ ಮತ್ತು ಸಹ ಪೈಲೆಟ್‌ ಕ್ಲೈವ್‌ ಕುಂದರ್‌ ಅವರ ನೇತೃತ್ವದಲ್ಲಿತ್ತು ಎಂದು ವಿಮಾನ ಸಂಸ್ಥೆ ಹೇಳಿದೆ.

ಇನ್ನೂ ಘಟನೆ ಕುರಿತು ವಿಮಾನಯಾನ ಸಚಿವ ಆಘಾತ ವ್ಯಕ್ತಪಡಿಸಿದ್ದು, ರಕ್ಷಣೆಗೆ ಕೇಂದ್ರ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿಯೂ ಬಿಡುಗಡೆಯಾಗಿದೆ.

ಏರ್‌ ಇಂಡಿಯಾ ತುರ್ತು ಸಂಖ್ಯೆ ಆರಂಭಿಸಿದ್ದು 1800 5691 444 ನ್ನು ಸಂಪರ್ಕಿಸುವಂತೆ ಕೋರಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago