ದೇಶ- ವಿದೇಶ

Plane crash | 825 ಅಡಿ ಎತ್ತರದಿಂದ ಪತನಗೊಂಡ ವಿಮಾನ.!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ಸುಮಾರು 242 ಪ್ರಯಾಣಿಕರಿದ್ದ ಈ ವಿಮಾನವು ಪತನವಾಗುವ ಸಂದರ್ಭದಲ್ಲಿ 825 ಅಡಿ ಎತ್ತರದಲ್ಲಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏರ್‌ ಇಂಡಿಯಾಗೆ ಸೇರಿದ AI-171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು.

ಪತನವಾದ ಸ್ಥಳವಾದ ಮೇಘಾನಿನಗರ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬುಲೆನ್ಸ್‌ಗಳು ಧಾವಿಸಿವೆ.

ಈ ವಿಮಾನವು ಕ್ಯಾಪ್ಟನ್‌ ಸುಮೀತ್‌ ಸಭರ್ವಾಲ್‌ ಮತ್ತು ಸಹ ಪೈಲೆಟ್‌ ಕ್ಲೈವ್‌ ಕುಂದರ್‌ ಅವರ ನೇತೃತ್ವದಲ್ಲಿತ್ತು ಎಂದು ವಿಮಾನ ಸಂಸ್ಥೆ ಹೇಳಿದೆ.

ಇನ್ನೂ ಘಟನೆ ಕುರಿತು ವಿಮಾನಯಾನ ಸಚಿವ ಆಘಾತ ವ್ಯಕ್ತಪಡಿಸಿದ್ದು, ರಕ್ಷಣೆಗೆ ಕೇಂದ್ರ ಎಲ್ಲಾ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಪತನಗೊಂಡ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿಯೂ ಬಿಡುಗಡೆಯಾಗಿದೆ.

ಏರ್‌ ಇಂಡಿಯಾ ತುರ್ತು ಸಂಖ್ಯೆ ಆರಂಭಿಸಿದ್ದು 1800 5691 444 ನ್ನು ಸಂಪರ್ಕಿಸುವಂತೆ ಕೋರಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago