ದೇಶ- ವಿದೇಶ

ಕೇಂದ್ರ ಬಜೆಟ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ಮೊತ್ತ ವಿಸ್ತರಣೆ.?

ನವದೆಹಲಿ: ಇದೇ ಜುಲೈ.23ರಂದು ಮಂಡನೆ ಆಗಲಿರುವ ಕೇಂದ್ರ ಬಜೆಟ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ಮೊತ್ತ ವಿಸ್ತರಿಸಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಬಜೆಟ್‌ ಮಂಡನೆ ಆಗಲು ಕೆಲವೇ ದಿನ ಬಾಕಿ ಇದೆ. ವಿವಿಧ ವಲಯಗಳ ನಿರೀಕ್ಷೆ ಹಲವಿದೆ. ಸರ್ಕಾರ ಆದ್ಯತೆ ಕೊಡಲಿರುವ ನಾಲ್ಕು ವರ್ಗಗಳೆಂದರೆ ಯುವಜನ, ಮಹಿಳೆ, ಕೃಷಿಕರು ಮತ್ತು ಶ್ರಮಿಕರು.

ಅನ್ನದಾತ ಎನಿಸಿರುವ ಕೃಷಿಕರ ಆದಾಯ ದ್ವಿಗುಣಗೊಳಿಸುವ ಸರ್ಕಾರದ ಗುರಿ ಇನ್ನೂ ಈಡೇರಿಲ್ಲ. 2019ರಲ್ಲಿ ಆರಂಭವಾದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಸುಮಾರು 10 ಕೋಟಿ ರೈತರನ್ನು ತಲುಪಿದೆ.

ಇದು ಇನ್ನೂ ಬಹಳಷ್ಟು ಸಣ್ಣ ರೈತರನ್ನು ತಲುಪಬೇಕಿದೆ. ಯೋಜನೆ ಅಡಿಯಲ್ಲಿ ಒಂದು ವರ್ಷದಲ್ಲಿ ನೀಡಲಾಗುತ್ತಿರುವ 6 ಸಾವಿರ ರೂ ಧನಸಹಾಯ ಸಾಲುವುದಿಲ್ಲ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ. ಈ ಮೊತ್ತವನ್ನು 8000 ರೂಗೆ ಹೆಚ್ಚಿಸಬೇಕೆಂದು ಕೃಷಿ ತಜ್ಞರು ಸೇರಿದಂತೆ ಅನೇಕರು ಸಲಹೆ ನೀಡಿದ್ದಾರೆ. ಸರ್ಕಾರ ಕೂಡ ಕಿವಿಗೊಟ್ಟು ಕೇಳಿಸಿಕೊಳ್ಳುತ್ತಿವೆ. ಆದರೆ, ಈ ಬಜೆಟ್‌ನಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ಮೊತ್ತ ಹೆಚ್ಚಳ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ 2019ರಲ್ಲಿ ಆರಂಭವಾದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ ಜಮೀನು ಮಾಲೀಕತ್ವ ಹೊಂದಿರುವ ಕೃಷಿಕರಿಗೆ ಕೇಂದ್ರ ಸರ್ಕಾರ ಒಂದು ವರ್ಷದಲ್ಲಿ ತಲಾ ಎರಡು ಸಾವಿರ ರೂಗಳ ಮೂರು ಕಂತುಗಳಲ್ಲಿ ಒಟ್ಟು ಆರು ಸಾವಿರ ರೂ ಹಣವನ್ನು ಕೊಡುತ್ತದೆ.

ನೀವು ಸ್ವಂತ ಕೃಷಿ ಭೂಮಿ ಹೊಂದಿದ್ದರೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ನೊಂದಾಯಿಸಬಹುದು. ಆದರೆ, ನೀವು ಜನಪ್ರತಿನಿಧಿಯಾಗಿರಬಾರದು, ಆದಾಯ ತೆರಿಗೆ ಪಾವತಿದಾರರಾಗಿರಬಾರದು, ವೃತ್ತಪರ ಕೆಲಸದಲ್ಲಿ ಇರಬಾರದು. ಈ ಯೋಜನೆಗೆ ನೊಂದಾಯಿಸುವುದು ಬಹಳ ಸುಲಭ. ಆನ್‌ಲೈನ್‌ನಲ್ಲೇ ಮಾಡಬಹುದು ಅಥವಾ ನಿಮ್ಮ ಊರಿನ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿಯೂ ನೊಂದಾಯಿಸಬಹುದು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

37 mins ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

43 mins ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

47 mins ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

52 mins ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

59 mins ago

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ…

1 hour ago