ದೇಶ- ವಿದೇಶ

ತಮಿಳುನಾಡು ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಫೆಂಗಲ್‌ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಭಾರೀ ಮಳೆಯಿಂದ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯು ಸಂಪೂರ್ಣ ಮುಳುಗಡೆಯಾಗಿದೆ. ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದು, ಜಿಲ್ಲೆಯ ಹಲವು ಕಡೆ ಸಾವು- ನೋವು, ಬೆಳೆ ನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ.

ಹಲವು ಕಡೆ ಸೇತುವೆಗಳು ಮತ್ತು ರಸ್ತೆಗಳು ಮುಳುಗಿ ಹೋಗಿ ಹಳ್ಳಿಗೆ, ವಸತಿ ಕಾಲೋನಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ, ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿವೆ.

ಡಿ.1ರಂದು ರಾತ್ರಿ ತಿರುವಣ್ಣಾಮಲೈನಲ್ಲಿ ಸುರಿದ ಮಳೆಗೆ ಬಂಡೆಯೊಂದು ಮನೆ ಮೇಲೆ ಬಿದ್ದು ಏಳು ಮಂದಿ ಸಿಲುಕಿಹಾಕಿಕೊಂಡಿದ್ದು, ಐವರು ಸಾವನ್ನಪ್ಪಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತುರ್ತು ಮರುಸ್ಥಾಪನೆ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (NDRF) 2,000 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ತಮಿಳುನಾಡು ಸಿಎಂ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಅಂದಾಜಿನ ಪ್ರಕಾರ ಮರಸ್ಥಾಪನೆಗಾಗಿ ಸುಮಾರು 2,475 ಕೋಟಿ ರೂಪಾಯಿ ಅಗತ್ಯವಿದೆ ಎಂದು ಸಿಎಂ ತಾವು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಆದಷ್ಟು ಬೇಗ ಕೇಂದ್ರ ತಂಡವನ್ನು ನಿಯೋಗಿಸಿ ಹಾನಿಯಾಗಿರುವ ಪ್ರದೇಶದ ಬಗ್ಗೆ ಸಮೀಕ್ಷೆ ನಡೆಸಿ ನೆರವು ನೀಡಬೇಕು ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

18 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

47 mins ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

2 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

10 hours ago