ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ.
ಅಜಿತ್ ಪವಾರ್ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರ ಪರವಾಗಿ ನ್ನನ ಅಲೋಚನೆಗಳಿವೆ. ಈ ಅಪಾರ ದುಃಖದ ಸಮಯದಲ್ಲಿ ಶೋಕತಪ್ತ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಅಜಿತ್ ಪವಾರ್ ಜೀ ಅವರು ತಳಮಟ್ಟದ ಜನಸಂಪರ್ಕ ಹೊಂದಿದ್ದ ಜನನಾಯಕರು. ಮಹಾರಾಷ್ಟ್ರದ ಜನರ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಅವರು ಪರಿಶ್ರಮದ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ಜ್ಞಾನ ಮತ್ತು ಬಡವರ ಹಾಗೂ ತುಳಿತಕ್ಕೊಳಗಾದವರ ಸಬಲೀಕರಣದ ಬಗ್ಗೆ ಅವರಿಗಿದ್ದ ಉತ್ಸಾಹ ನಿಜಕ್ಕೂ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತೀವ್ರ ಆಘಾತಕಾರಿ ಮತ್ತು ಬೇಸರದ ಸಂಗತಿಯಾಗಿದೆ. ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…