ದೇಶ- ವಿದೇಶ

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ನವದೆಹಲಿಯಲ್ಲಿಂದು ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಸಭೆ ಹಾಗೂ ಪಕ್ಷದ ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ತಮಿಳುನಾಡಿನ ಅನುಭವಿ ಬಿಜೆಪಿ ನಾಯಕ ರಾಧಾಕೃಷ್ಣನ್ನ ಅವರನ್ನು ನಿನ್ನೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹೆಸರಿಸಿದ್ದರು.

ಈ ಹಿನ್ನೆಲೆಯಲ್ಲಿಂದು ರಾಧಾಕೃಷ್ಣನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಅಭಿನಂದಿಸಿದರು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಎನ್‌ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಕ್ಕಾಗಿ ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸಿದೆ. ಅವರ ದೀರ್ಘ ವರ್ಷಗಳ ಸಾರ್ವಜನಿಕ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಅವರು ಯಾವಾಗಲು ಪ್ರದರ್ಶಿಸಿದ ಅದೇ ಸಮರ್ಪಣೆ ಹಾಗೂ ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

32 mins ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

2 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

3 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

6 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

6 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

6 hours ago