ದೇಶ- ವಿದೇಶ

ಅಮಿತ್‌ ಶಾ ಹೇಳಿಕೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಬಹಳ
ಹಿಂದಿನಿಂದಲೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸದಾ ಅವಮಾನಿಸಿದ್ದರು ಎಂಬುದರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಅಮಿತ್‌ ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಅವರು ಈ ನಾಟಕ ಮಾಡುತ್ತಿದ್ದಾರೆ. ಜನರಿಗೆ ಸತ್ಯ ತಿಳಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷ ಕೊಳೆತು ನಾರುವ ಪರಿಸರ ವ್ಯವಸ್ಥೆಯನ್ನು ಹಾಗೂ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಬಹುದು ಎಂದುಕೊಂಡಿದ್ದರೆ ಅದು ತಪ್ಪು. ಅದರಲ್ಲೂ ಬಾಬಾ ಸಾಹೇಬರಿಗೆ ಕಾಂಗ್ರೆಸ್‌ ಅವರು ಮಾಡಿದ ಅವಮಾನಗಳನ್ನು ಅವರು ಮರೆಮಾಚಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೆಹರು ಮತ್ತು ಗಾಂಧಿ ಕುಟುಂಬವನ್ನು ಉಲ್ಲೇಖಿಸಿ, ಒಂದು ರಾಜವಂಶದ ನೇತೃತ್ವದ ಪಕ್ಷವು ಅಂಬೇಡ್ಕರ್‌ ಅವರ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ಹೇಗೆಡ ತೊಡಗಿದೆ ಎಂಬುದನ್ನು ಜನರು ಪದೇ ಪದೇ ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದು ಸೇರಿದಂತೆ ಕಾಂಗ್ರೆಸ್‌ ಮಾಡಿದ ಪಾಪಗಳ ಪಟ್ಟಿ ದೊಡ್ಡದಿದೆ ಎಂದಿದ್ದಾರೆ. ದೇಶದ ಮೊದಲ ಪ್ರಧಾನಿ ಅಂಬೇಡ್ಕರ್‌ ವಿರುದ್ಧ ಪ್ರಚಾರ ಮಾಡಿ ಬಾಬಾ ಸಾಹೇಬರನ್ನು ಸೋಲಿಸಿದ್ದರು. ಅಲ್ಲದೇ ಅಂಬೇಡ್ಕರ್‌ ಅವರಿಗೆ ನೀಡಬೇಕಿದ್ದ ಭಾರತರತ್ನವನ್ನು ನಿರಾಕರಿಸಲಾಯಿತು. ಸಂಸತ್ತಿನ ಸೆಂಟ್ರಲ್‌ ಸಭಾಂಗಣದಲ್ಲಿ ಅವರ ಭಾವಚಿತ್ರ ಹಾಕಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

45 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

6 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

6 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

6 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

6 hours ago