ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷ ಬಹಳ
ಹಿಂದಿನಿಂದಲೂ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಅವಮಾನಿಸಿದ್ದರು ಎಂಬುದರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಅಮಿತ್ ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್ನವರು ಸ್ಪಷ್ಟವಾಗಿ ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಅವರು ಈ ನಾಟಕ ಮಾಡುತ್ತಿದ್ದಾರೆ. ಜನರಿಗೆ ಸತ್ಯ ತಿಳಿದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಕೊಳೆತು ನಾರುವ ಪರಿಸರ ವ್ಯವಸ್ಥೆಯನ್ನು ಹಾಗೂ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಬಹುದು ಎಂದುಕೊಂಡಿದ್ದರೆ ಅದು ತಪ್ಪು. ಅದರಲ್ಲೂ ಬಾಬಾ ಸಾಹೇಬರಿಗೆ ಕಾಂಗ್ರೆಸ್ ಅವರು ಮಾಡಿದ ಅವಮಾನಗಳನ್ನು ಅವರು ಮರೆಮಾಚಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನೆಹರು ಮತ್ತು ಗಾಂಧಿ ಕುಟುಂಬವನ್ನು ಉಲ್ಲೇಖಿಸಿ, ಒಂದು ರಾಜವಂಶದ ನೇತೃತ್ವದ ಪಕ್ಷವು ಅಂಬೇಡ್ಕರ್ ಅವರ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಎಸ್ಸಿ/ಎಸ್ಟಿ ಸಮುದಾಯಗಳನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ಹೇಗೆಡ ತೊಡಗಿದೆ ಎಂಬುದನ್ನು ಜನರು ಪದೇ ಪದೇ ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಅಂಬೇಡ್ಕರ್ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದು ಸೇರಿದಂತೆ ಕಾಂಗ್ರೆಸ್ ಮಾಡಿದ ಪಾಪಗಳ ಪಟ್ಟಿ ದೊಡ್ಡದಿದೆ ಎಂದಿದ್ದಾರೆ. ದೇಶದ ಮೊದಲ ಪ್ರಧಾನಿ ಅಂಬೇಡ್ಕರ್ ವಿರುದ್ಧ ಪ್ರಚಾರ ಮಾಡಿ ಬಾಬಾ ಸಾಹೇಬರನ್ನು ಸೋಲಿಸಿದ್ದರು. ಅಲ್ಲದೇ ಅಂಬೇಡ್ಕರ್ ಅವರಿಗೆ ನೀಡಬೇಕಿದ್ದ ಭಾರತರತ್ನವನ್ನು ನಿರಾಕರಿಸಲಾಯಿತು. ಸಂಸತ್ತಿನ ಸೆಂಟ್ರಲ್ ಸಭಾಂಗಣದಲ್ಲಿ ಅವರ ಭಾವಚಿತ್ರ ಹಾಕಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…