ದೇಶ- ವಿದೇಶ

ಅಮಿತ್‌ ಶಾ ಹೇಳಿಕೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಬಹಳ
ಹಿಂದಿನಿಂದಲೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸದಾ ಅವಮಾನಿಸಿದ್ದರು ಎಂಬುದರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಅಮಿತ್‌ ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಅವರು ಈ ನಾಟಕ ಮಾಡುತ್ತಿದ್ದಾರೆ. ಜನರಿಗೆ ಸತ್ಯ ತಿಳಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷ ಕೊಳೆತು ನಾರುವ ಪರಿಸರ ವ್ಯವಸ್ಥೆಯನ್ನು ಹಾಗೂ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಬಹುದು ಎಂದುಕೊಂಡಿದ್ದರೆ ಅದು ತಪ್ಪು. ಅದರಲ್ಲೂ ಬಾಬಾ ಸಾಹೇಬರಿಗೆ ಕಾಂಗ್ರೆಸ್‌ ಅವರು ಮಾಡಿದ ಅವಮಾನಗಳನ್ನು ಅವರು ಮರೆಮಾಚಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೆಹರು ಮತ್ತು ಗಾಂಧಿ ಕುಟುಂಬವನ್ನು ಉಲ್ಲೇಖಿಸಿ, ಒಂದು ರಾಜವಂಶದ ನೇತೃತ್ವದ ಪಕ್ಷವು ಅಂಬೇಡ್ಕರ್‌ ಅವರ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ಹೇಗೆಡ ತೊಡಗಿದೆ ಎಂಬುದನ್ನು ಜನರು ಪದೇ ಪದೇ ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದು ಸೇರಿದಂತೆ ಕಾಂಗ್ರೆಸ್‌ ಮಾಡಿದ ಪಾಪಗಳ ಪಟ್ಟಿ ದೊಡ್ಡದಿದೆ ಎಂದಿದ್ದಾರೆ. ದೇಶದ ಮೊದಲ ಪ್ರಧಾನಿ ಅಂಬೇಡ್ಕರ್‌ ವಿರುದ್ಧ ಪ್ರಚಾರ ಮಾಡಿ ಬಾಬಾ ಸಾಹೇಬರನ್ನು ಸೋಲಿಸಿದ್ದರು. ಅಲ್ಲದೇ ಅಂಬೇಡ್ಕರ್‌ ಅವರಿಗೆ ನೀಡಬೇಕಿದ್ದ ಭಾರತರತ್ನವನ್ನು ನಿರಾಕರಿಸಲಾಯಿತು. ಸಂಸತ್ತಿನ ಸೆಂಟ್ರಲ್‌ ಸಭಾಂಗಣದಲ್ಲಿ ಅವರ ಭಾವಚಿತ್ರ ಹಾಕಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

4 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

6 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

24 hours ago