ದೇಶ- ವಿದೇಶ

ಅಮಿತ್‌ ಶಾ ಹೇಳಿಕೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಬಹಳ
ಹಿಂದಿನಿಂದಲೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸದಾ ಅವಮಾನಿಸಿದ್ದರು ಎಂಬುದರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಅಮಿತ್‌ ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಅವರು ಈ ನಾಟಕ ಮಾಡುತ್ತಿದ್ದಾರೆ. ಜನರಿಗೆ ಸತ್ಯ ತಿಳಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷ ಕೊಳೆತು ನಾರುವ ಪರಿಸರ ವ್ಯವಸ್ಥೆಯನ್ನು ಹಾಗೂ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಬಹುದು ಎಂದುಕೊಂಡಿದ್ದರೆ ಅದು ತಪ್ಪು. ಅದರಲ್ಲೂ ಬಾಬಾ ಸಾಹೇಬರಿಗೆ ಕಾಂಗ್ರೆಸ್‌ ಅವರು ಮಾಡಿದ ಅವಮಾನಗಳನ್ನು ಅವರು ಮರೆಮಾಚಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೆಹರು ಮತ್ತು ಗಾಂಧಿ ಕುಟುಂಬವನ್ನು ಉಲ್ಲೇಖಿಸಿ, ಒಂದು ರಾಜವಂಶದ ನೇತೃತ್ವದ ಪಕ್ಷವು ಅಂಬೇಡ್ಕರ್‌ ಅವರ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ಹೇಗೆಡ ತೊಡಗಿದೆ ಎಂಬುದನ್ನು ಜನರು ಪದೇ ಪದೇ ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದು ಸೇರಿದಂತೆ ಕಾಂಗ್ರೆಸ್‌ ಮಾಡಿದ ಪಾಪಗಳ ಪಟ್ಟಿ ದೊಡ್ಡದಿದೆ ಎಂದಿದ್ದಾರೆ. ದೇಶದ ಮೊದಲ ಪ್ರಧಾನಿ ಅಂಬೇಡ್ಕರ್‌ ವಿರುದ್ಧ ಪ್ರಚಾರ ಮಾಡಿ ಬಾಬಾ ಸಾಹೇಬರನ್ನು ಸೋಲಿಸಿದ್ದರು. ಅಲ್ಲದೇ ಅಂಬೇಡ್ಕರ್‌ ಅವರಿಗೆ ನೀಡಬೇಕಿದ್ದ ಭಾರತರತ್ನವನ್ನು ನಿರಾಕರಿಸಲಾಯಿತು. ಸಂಸತ್ತಿನ ಸೆಂಟ್ರಲ್‌ ಸಭಾಂಗಣದಲ್ಲಿ ಅವರ ಭಾವಚಿತ್ರ ಹಾಕಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

5 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

9 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

11 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

14 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

14 hours ago