ದೇಶ- ವಿದೇಶ

ಅಮಿತ್‌ ಶಾ ಹೇಳಿಕೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಅಮಾನಿಸಿದ್ದಾರೆ ಎಂಬ ಕಾಂಗ್ರೆಸ್‌ ಆರೋಪವನ್ನು ತಳ್ಳಿ ಹಾಕಿ ಕೇಂದ್ರ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌ ಪಕ್ಷ ಬಹಳ
ಹಿಂದಿನಿಂದಲೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸದಾ ಅವಮಾನಿಸಿದ್ದರು ಎಂಬುದರ ಇತಿಹಾಸವನ್ನು ಬಹಿರಂಗಪಡಿಸಿದ್ದಾರೆ. ಅಮಿತ್‌ ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ಭ್ರಮೆಗೊಂಡಿದ್ದಾರೆ. ಹೀಗಾಗಿ ಅವರು ಈ ನಾಟಕ ಮಾಡುತ್ತಿದ್ದಾರೆ. ಜನರಿಗೆ ಸತ್ಯ ತಿಳಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷ ಕೊಳೆತು ನಾರುವ ಪರಿಸರ ವ್ಯವಸ್ಥೆಯನ್ನು ಹಾಗೂ ದುರುದ್ದೇಶಪೂರಿತ ಸುಳ್ಳುಗಳು ತಮ್ಮ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಚಬಹುದು ಎಂದುಕೊಂಡಿದ್ದರೆ ಅದು ತಪ್ಪು. ಅದರಲ್ಲೂ ಬಾಬಾ ಸಾಹೇಬರಿಗೆ ಕಾಂಗ್ರೆಸ್‌ ಅವರು ಮಾಡಿದ ಅವಮಾನಗಳನ್ನು ಅವರು ಮರೆಮಾಚಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ನೆಹರು ಮತ್ತು ಗಾಂಧಿ ಕುಟುಂಬವನ್ನು ಉಲ್ಲೇಖಿಸಿ, ಒಂದು ರಾಜವಂಶದ ನೇತೃತ್ವದ ಪಕ್ಷವು ಅಂಬೇಡ್ಕರ್‌ ಅವರ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯಗಳನ್ನು ಅವಮಾನಿಸಲು ಸಾಧ್ಯವಿರುವ ಎಲ್ಲ ಕೊಳಕು ತಂತ್ರಗಳಲ್ಲಿ ಹೇಗೆಡ ತೊಡಗಿದೆ ಎಂಬುದನ್ನು ಜನರು ಪದೇ ಪದೇ ನೋಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಅಂಬೇಡ್ಕರ್‌ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ್ದು ಸೇರಿದಂತೆ ಕಾಂಗ್ರೆಸ್‌ ಮಾಡಿದ ಪಾಪಗಳ ಪಟ್ಟಿ ದೊಡ್ಡದಿದೆ ಎಂದಿದ್ದಾರೆ. ದೇಶದ ಮೊದಲ ಪ್ರಧಾನಿ ಅಂಬೇಡ್ಕರ್‌ ವಿರುದ್ಧ ಪ್ರಚಾರ ಮಾಡಿ ಬಾಬಾ ಸಾಹೇಬರನ್ನು ಸೋಲಿಸಿದ್ದರು. ಅಲ್ಲದೇ ಅಂಬೇಡ್ಕರ್‌ ಅವರಿಗೆ ನೀಡಬೇಕಿದ್ದ ಭಾರತರತ್ನವನ್ನು ನಿರಾಕರಿಸಲಾಯಿತು. ಸಂಸತ್ತಿನ ಸೆಂಟ್ರಲ್‌ ಸಭಾಂಗಣದಲ್ಲಿ ಅವರ ಭಾವಚಿತ್ರ ಹಾಕಲು ಬಿಡಲಿಲ್ಲ ಎಂದು ಕಿಡಿಕಾರಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

12 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

12 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

13 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

14 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

14 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

16 hours ago