Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ ತೀರ್ಥ’ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.

ಹೊಸ ಸಂಕೀರ್ಣದಲ್ಲಿ ಸೇವಾ ತೀರ್ಥದ ಫಲಕವನ್ನು ಮೋದಿ ಅನಾವರಣಗೊಳಿಸಿದರು. ಸಂಕೀರ್ಣದ ಗೋಡೆಯ ಮೇಲೆ ದೇವನಾಗರಿ ಲಿಪಿಯಲ್ಲಿ ಕೆತ್ತಲಾದ ಹೆಸರು, ಅದರ ಕೆಳಗೆ ‘ನಾಗರಿಕ ದೇವೋ ಭವ’ ( ನಾಗರಿಕ ದೇವರಿಗೆ ಸಮಾನ) ಎಂಬ ಧ್ಯೇಯವಾಕ್ಯವಿದೆ. ರೈಸಿನಾ ಹಿಲ್ ಪ್ರದೇಶದ ಸೌತ್ ಬ್ಲಾಕ್‌ನಲ್ಲಿದ್ದ ಪ್ರಧಾನಿ ಕಾರ್ಯಾಲಯ ಇನ್ನು ಮುಂದೆ ಈ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಜತೆಗೆ ವಿವಿಧ ಸ್ಥಳಗಳಲ್ಲಿ ನೆಲೆಗೊಂಡಿದ್ದ ಸಚಿವಾಲಯಗಳ ಕಚೇರಿ, ಸಂಪುಟ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ ಕಚೇರಿ ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ.

ಉದ್ಘಾಟನಾ ಸಮಾರಂಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್, ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:
error: Content is protected !!