ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ ತೀರ್ಥ’ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.
ಹೊಸ ಸಂಕೀರ್ಣದಲ್ಲಿ ಸೇವಾ ತೀರ್ಥದ ಫಲಕವನ್ನು ಮೋದಿ ಅನಾವರಣಗೊಳಿಸಿದರು. ಸಂಕೀರ್ಣದ ಗೋಡೆಯ ಮೇಲೆ ದೇವನಾಗರಿ ಲಿಪಿಯಲ್ಲಿ ಕೆತ್ತಲಾದ ಹೆಸರು, ಅದರ ಕೆಳಗೆ ‘ನಾಗರಿಕ ದೇವೋ ಭವ’ ( ನಾಗರಿಕ ದೇವರಿಗೆ ಸಮಾನ) ಎಂಬ ಧ್ಯೇಯವಾಕ್ಯವಿದೆ. ರೈಸಿನಾ ಹಿಲ್ ಪ್ರದೇಶದ ಸೌತ್ ಬ್ಲಾಕ್ನಲ್ಲಿದ್ದ ಪ್ರಧಾನಿ ಕಾರ್ಯಾಲಯ ಇನ್ನು ಮುಂದೆ ಈ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಜತೆಗೆ ವಿವಿಧ ಸ್ಥಳಗಳಲ್ಲಿ ನೆಲೆಗೊಂಡಿದ್ದ ಸಚಿವಾಲಯಗಳ ಕಚೇರಿ, ಸಂಪುಟ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ ಕಚೇರಿ ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ.
ಉದ್ಘಾಟನಾ ಸಮಾರಂಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್, ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…