ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ ತೀರ್ಥ’ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು.
ಹೊಸ ಸಂಕೀರ್ಣದಲ್ಲಿ ಸೇವಾ ತೀರ್ಥದ ಫಲಕವನ್ನು ಮೋದಿ ಅನಾವರಣಗೊಳಿಸಿದರು. ಸಂಕೀರ್ಣದ ಗೋಡೆಯ ಮೇಲೆ ದೇವನಾಗರಿ ಲಿಪಿಯಲ್ಲಿ ಕೆತ್ತಲಾದ ಹೆಸರು, ಅದರ ಕೆಳಗೆ ‘ನಾಗರಿಕ ದೇವೋ ಭವ’ ( ನಾಗರಿಕ ದೇವರಿಗೆ ಸಮಾನ) ಎಂಬ ಧ್ಯೇಯವಾಕ್ಯವಿದೆ. ರೈಸಿನಾ ಹಿಲ್ ಪ್ರದೇಶದ ಸೌತ್ ಬ್ಲಾಕ್ನಲ್ಲಿದ್ದ ಪ್ರಧಾನಿ ಕಾರ್ಯಾಲಯ ಇನ್ನು ಮುಂದೆ ಈ ಸೇವಾ ತೀರ್ಥಕ್ಕೆ ಸ್ಥಳಾಂತರಗೊಳ್ಳಲಿದೆ. ಜತೆಗೆ ವಿವಿಧ ಸ್ಥಳಗಳಲ್ಲಿ ನೆಲೆಗೊಂಡಿದ್ದ ಸಚಿವಾಲಯಗಳ ಕಚೇರಿ, ಸಂಪುಟ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ ಕಚೇರಿ ಇಲ್ಲಿಗೆ ಸ್ಥಳಾಂತರಗೊಳ್ಳಲಿವೆ.
ಉದ್ಘಾಟನಾ ಸಮಾರಂಭದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್, ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…