ದೇಶ- ವಿದೇಶ

ಪ್ರಧಾನಿ ಮೋದಿ ಭೇಟಿಯಾದ ಬಿ.ವೈ.ವಿಜಯೇಂದ್ರ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದಿದ್ದಾರೆ.

ಮೋದಿ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಹೇಳಿದಂತಹ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಅಲ್ಲದೇ ಪ್ರಧಾನಿ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

3 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

5 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

6 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

6 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

6 hours ago