ದೇಶ- ವಿದೇಶ

ಪ್ರಧಾನಿ ಮೋದಿ ಭೇಟಿಯಾದ ಬಿ.ವೈ.ವಿಜಯೇಂದ್ರ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದಿದ್ದಾರೆ.

ಮೋದಿ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಹೇಳಿದಂತಹ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಅಲ್ಲದೇ ಪ್ರಧಾನಿ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago