ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ ಸಾಧನೆಗಳನ್ನು ಹೊಗಳಿ ಪ್ರಶಂಸಿಸಿದ್ದಾರೆ. ಭಾರತದ ರೈತರು ಸಾಂಪ್ರದಾಯಿಕ ಕೃಷಿಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಿ ಅದ್ಭುತ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು.
ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಕೃಷಿ ಪ್ರಯತ್ನಗಳನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಮೋದಿ, “ಭಾರತದ ರೈತರು ಕೇವಲ ಅನ್ನದಾತರಲ್ಲ, ಭೂಮಿಯ ನಿಜವಾದ ಭಕ್ತರು. ಮಣ್ಣನ್ನು ಚಿನ್ನವಾಗಿಸುವ ಕಲೆಯನ್ನು ರೈತರಿಂದಲೇ ಕಲಿಯಬೇಕು” ಎಂದು ಹೇಳಿದರು.
ರೈತರು ಇಂದು ಉತ್ಪಾದನೆಯ ಜೊತೆಗೆ ಗುಣಮಟ್ಟ, ಮೌಲ್ಯವರ್ಧನೆ ಮತ್ತು ಹೊಸ ಮಾರುಕಟ್ಟೆಗಳತ್ತ ಗಮನ ಹರಿಸುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಕರ್ನಾಟಕದಿಂದ ನಂಜನಗೂಡಿನ ಬಾಳೆಹಣ್ಣು, ಮೈಸೂರಿನ ವೀಳ್ಯದೆಲೆ ಮತ್ತು ಇಂಡಿ ನಿಂಬೆಹಣ್ಣುಗಳಂತಹ ಉತ್ಪನ್ನಗಳು ವಿಮಾನ ಮೂಲಕ ವಿದೇಶಗಳಿಗೆ ರಫ್ತಾಗುತ್ತಿರುವುದನ್ನು ಉಲ್ಲೇಖಿಸಿ, ರೈತರ ಶ್ರಮದಿಂದಾಗಿ ಭಾರತದ ಕೃಷಿ ಉತ್ಪನ್ನಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿವೆ ಎಂದು ಮೋದಿ ತಿಳಿಸಿದರು.
ಈ ಪ್ರಶಂಸೆಯು ಕರ್ನಾಟಕದ ರೈತ ಸಮುದಾಯಕ್ಕೆ ಹೆಚ್ಚಿನ ಉತ್ಸಾಹ ತುಂಬಿದ್ದು, ರಾಜ್ಯದ ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿರುವ ನಾವೀನ್ಯತೆಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ ಎಂಬುದಕ್ಕೆ ಸಾಕ್ಷಿಯಾಗಿದೆ. ಮೋದಿ ಅವರು ತಮ್ಮ ಟ್ವೀಟ್ನಲ್ಲಿ ಕೂಡ ಈ ವಿಷಯವನ್ನು ಹಂಚಿಕೊಂಡು, “#MannKiBaat” ಹ್ಯಾಶ್ಟ್ಯಾಗ್ನೊಂದಿಗೆ ರೈತರ ಪ್ರಗತಿಯನ್ನು ಎತ್ತಿ ತೋರಿಸಿದ್ದಾರೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…