PM Modi
ತಿಯಾನ್ಜಿನ್ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.
ತಿಯಾನ್ಜಿನ್ನಲ್ಲಿ ನಡೆಯುತ್ತಿರುವ ಎಸ್ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಯಾಮ್ನಲ್ಲಿ ನಡೆದ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಮಾನವೀಯತೆಯ ಮೇಲೆ ನಂಬಿಕೆಯನ್ನಿಡುವ ದೇಶಗಳಿಗೂ ಬಹಿರಂಗ ಸವಾಲಾಗಿತ್ತು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಭಯೋತ್ಪಾದನೆ ವಿರುದ್ಧ ದ್ವಂದ ನೀತಿ, ನಿಲುವುಗಳನ್ನು ಎಲ್ಲರೂ ಒಮ್ಮತದಿಂದ ತಿರಸ್ಕರಿಸಬೇಕು. ಇದು ಮಾನವೀಯತೆಯತ್ತ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವುದನ್ನು ಒಪ್ಪಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೆಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
ಭಾರತ ಕಳೆದ ನಾಲ್ಕು ದಶಕಗಳಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ. ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅನೇಕ ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ . ಭಯೋತ್ಪಾದನೆ ಎದುರಿಸುವಲ್ಲಿ ದ್ವಂದ ನೀತಿ ಇರಬಾರದು. ನಾವೆಲ್ಲರೂ ಸ್ಪಷ್ಟ ಹಾಗೂ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…