ದೇಶ- ವಿದೇಶ

ಇಂದಿನಿಂದ ಬಜೆಟ್‌ ಅಧಿವೇಶನ| ಐತಿಹಾಸಿಕ ಬಿಲ್‌ಗಳ ಮಂಡನೆಯಾಗಲಿದೆ: ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಈ ಬಾರಿ ಐತಿಹಾಸಿಕ ಬಿಲ್‌ಗಳ ಮಂಡನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಂಸತ್‌ ಭವನದ ಬಳಿ ಇಂದು(ಜನವರಿ.31) ಕೇಂದ್ರ ಬಜೆಟ್‌ ಕುರಿತು ಮಾತನಾಡಿದ ಅವರು, ನಾಳೆ(ಫೆ.1) ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್‌ ಅವರು ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ದೇಶದ ಅಭಿವೃದ್ಧಿಗಳ ಬಗ್ಗೆ ಅನೇಕ ರೀತಿಯ ಯೋಜನೆಗಳನ್ನು ಜಾರಿಗೊಳಿಸಲು ಚಿಂತಿಸಲಾಗಿದೆ. ಅಲ್ಲದೇ ಯುವಕರನ್ನು ಗಮನದಲ್ಲಿಟ್ಟಿಕೊಂಡು ಯೋಜನೆಗಳನ್ನು ಜಾರಿ ತರಲಾಗುವುದು ಎಂದರು.

ಇಂದಿನ ಸಂಸತ್‌ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸುಗಮ ಕಲಾಪಗಳಿಗೆ ಅವಕಾಶ ಮಾಡಿಕೊಡಬೇಕು. ದೇಶದ ಬಡವರಿಗೂ ಲಕ್ಷ್ಮೀದೇವಿಯ ಕೃಪೆ ಸಿಗಲಿ ಎಂದು ವಿರೋಧ ಪಕ್ಷಗಳ ಸದಸ್ಯರಿಗೆ ಮನವಿ ಮಾಡಿದರು.

ಇನ್ನೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನ ಕೇಂದ್ರ ಬಜೆಟ್‌ ಅಧಿವೇಶನದಲ್ಲಿ ಸಂಸತ್‌ ಸದನವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದಾರೆ.

 

AddThis Website Tools
ಅರ್ಚನ ಎಸ್‌ ಎಸ್

Recent Posts

ತ್ರಿಭಾಷಾ ಫೈಟ್‌: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಟಾಂಗ್‌ ನೀಡಿದ ಆಂಧ್ರದ ಡಿಸಿಎಂ ಪವನ್‌ ಕಲ್ಯಾಣ್‌

ಆಂಧ್ರಪ್ರದೇಶ: ಆರ್ಥಿಕ ಲಾಭಕ್ಕಾಗಿ ತಮ್ಮ ಚಲನಚಿತ್ರಗಳನ್ನು ಹಿಂದಿಗೆ ಭಾಷಾಂತರ ಮಾಡಲು ಅವಕಾಶ ನೀಡುವ ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ಏಕೆ…

52 seconds ago

ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದ ತನಿಖೆಗೆ ಸಮಿತಿ ರಚನೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ ಬಗ್ಗೆ ತನಿಖೆ ನಡೆಯುತ್ತಿದ್ದು, ಇದಕ್ಕಾಗಿಯೇ ವಿಶೇಷ ಸಮಿತಿಯೊಂದನ್ನು ರಚನೆ ಮಾಡಲಾಗಿದೆ…

52 seconds ago

ಕೊಳ್ಳೇಗಾಲ| ಮಾವನಿಂದ ದೈಹಿಕ ಕಿರುಕುಳ ಆರೋಪ: ಸೊಸೆ ಆತ್ಮಹತ್ಯೆ?

ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…

41 mins ago

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಸರ್ಕಾರಿ ವಾಹನದಲ್ಲೇ ಚಿನ್ನ ಸಾಗಾಟ?

ಬೆಂಗಳೂರು: ನಟಿ ರನ್ಯಾರಾವ್‌ ಅವರನ್ನು ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…

43 mins ago

ಎಚ್.ಡಿ.ಕೋಟೆ: ಜಿಂಕೆ ಬೇಟೆಯಾಡಿದ ಹುಲಿ

ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…

58 mins ago

ಅಪಘಾತದಲ್ಲಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್‌

ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್‌ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…

1 hour ago