ದೇಶ- ವಿದೇಶ

ಇಂದಿನಿಂದ ಬಜೆಟ್‌ ಅಧಿವೇಶನ| ಐತಿಹಾಸಿಕ ಬಿಲ್‌ಗಳ ಮಂಡನೆಯಾಗಲಿದೆ: ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಕೇಂದ್ರ ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಈ ಬಾರಿ ಐತಿಹಾಸಿಕ ಬಿಲ್‌ಗಳ ಮಂಡನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಂಸತ್‌ ಭವನದ ಬಳಿ ಇಂದು(ಜನವರಿ.31) ಕೇಂದ್ರ ಬಜೆಟ್‌ ಕುರಿತು ಮಾತನಾಡಿದ ಅವರು, ನಾಳೆ(ಫೆ.1) ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್‌ ಅವರು ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ದೇಶದ ಅಭಿವೃದ್ಧಿಗಳ ಬಗ್ಗೆ ಅನೇಕ ರೀತಿಯ ಯೋಜನೆಗಳನ್ನು ಜಾರಿಗೊಳಿಸಲು ಚಿಂತಿಸಲಾಗಿದೆ. ಅಲ್ಲದೇ ಯುವಕರನ್ನು ಗಮನದಲ್ಲಿಟ್ಟಿಕೊಂಡು ಯೋಜನೆಗಳನ್ನು ಜಾರಿ ತರಲಾಗುವುದು ಎಂದರು.

ಇಂದಿನ ಸಂಸತ್‌ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸುಗಮ ಕಲಾಪಗಳಿಗೆ ಅವಕಾಶ ಮಾಡಿಕೊಡಬೇಕು. ದೇಶದ ಬಡವರಿಗೂ ಲಕ್ಷ್ಮೀದೇವಿಯ ಕೃಪೆ ಸಿಗಲಿ ಎಂದು ವಿರೋಧ ಪಕ್ಷಗಳ ಸದಸ್ಯರಿಗೆ ಮನವಿ ಮಾಡಿದರು.

ಇನ್ನೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನ ಕೇಂದ್ರ ಬಜೆಟ್‌ ಅಧಿವೇಶನದಲ್ಲಿ ಸಂಸತ್‌ ಸದನವನ್ನು ಉದ್ದೇಶಿಸಿ ಕೆಲವೇ ಕ್ಷಣಗಳಲ್ಲಿ ಭಾಷಣ ಮಾಡಲಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

14 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

14 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

17 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

17 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

17 hours ago