ದೇಶ- ವಿದೇಶ

ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21) ಆಯೋಜಿಸಿದ್ದ ಸ್ಕೂಲ್‌ ಆಫ್‌ ಅಲ್ಟಿಮೇಟ್‌ ಲೀಡರ್‌ಶಿಪ್‌ ಕಾನ್‌ಕ್ಲೈವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರೀಕರ ಅಭಿವೃದ್ಧಿ ಅಗತ್ಯ. ಪ್ರಜೆಗಳಿಂದ ಜಗತ್ತು ನಿರ್ಮಾಣವಾಗುತ್ತದೆ. ಅಂತೆಯೇ ವೈಯಕ್ತಿಕ ಅಭಿವೃದ್ಧಿಯ ಮೂಲಕ ರಾಷ್ಟ್ರದ ಯಾವುದೇ ಎತ್ತರವನ್ನು ಸಾಧಿಸಬಹುದು. ಉತ್ತಮ ನಾಯಕರ ಅಭಿವೃದ್ಧಿ ಅಗತ್ಯವಾಗಿದೆ. ಹೀಗಾಗಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್‌ಶಿಪ್ ಸ್ಥಾಪನೆಯು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.

ಭಾರತವನ್ನು ಸ್ವಾಮಿ ವಿವೇಕಾನಂದರು ಗುಲಾಮಗಿರಿಯಿಂದ ಹೊರತರಲು ಬಯಸಿದ್ದರರು. ಅವರಿಗೆ 100 ನಾಯಕರು ಇದ್ದರೆ ಸಾಕು, ಈ ಭಾರತಕ್ಕೆ ಸ್ವಾತಂತ್ರ್ಯ ನೀಡುವುದಲ್ಲದೇ, ಜಗತ್ತಿನಲ್ಲೇ ನಂಬರ್‌ ಒನ್‌ ದೇಶವನ್ನಾಗಿ ಮಾಡಬಹುದು ಎಂದು ನಂಬಿದ್ದರು. ನಾವೆಲ್ಲರೂ ಈ ಮಂತ್ರದೊಂದಿಗೆ ಮುಂದುವಿಯಬೇಕು ಎಂದರು.

ಇನ್ನು ಮುಂದಿನ ದಿನಗಳಲ್ಲಿ ಭಾತದ ಪ್ರಭಾವವೂ ಎಲ್ಲಾ ವಲಯಗಳಲ್ಲಿ ಅನೇಕ ಪಟ್ಟು ಅಧಿಕವಾಗುತ್ತದೆ. ಒಂದು ರೀತಿಯಲ್ಲಿ ಭಾರತದ ಸಂಪೂರ್ಣ ದೃಷ್ಟಿಕೋನ ಹಾಗೂ ವಿಷ್ಯವು ಬಲವಾದ ನಾಯಕತ್ವ ಪೀಳಿಗೆಯ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

22 mins ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

42 mins ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

53 mins ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

1 hour ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

2 hours ago

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

3 hours ago