ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು(ಫೆಬ್ರವರಿ.21) ಆಯೋಜಿಸಿದ್ದ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ಶಿಪ್ ಕಾನ್ಕ್ಲೈವ್ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರೀಕರ ಅಭಿವೃದ್ಧಿ ಅಗತ್ಯ. ಪ್ರಜೆಗಳಿಂದ ಜಗತ್ತು ನಿರ್ಮಾಣವಾಗುತ್ತದೆ. ಅಂತೆಯೇ ವೈಯಕ್ತಿಕ ಅಭಿವೃದ್ಧಿಯ ಮೂಲಕ ರಾಷ್ಟ್ರದ ಯಾವುದೇ ಎತ್ತರವನ್ನು ಸಾಧಿಸಬಹುದು. ಉತ್ತಮ ನಾಯಕರ ಅಭಿವೃದ್ಧಿ ಅಗತ್ಯವಾಗಿದೆ. ಹೀಗಾಗಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ಶಿಪ್ ಸ್ಥಾಪನೆಯು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.
ಭಾರತವನ್ನು ಸ್ವಾಮಿ ವಿವೇಕಾನಂದರು ಗುಲಾಮಗಿರಿಯಿಂದ ಹೊರತರಲು ಬಯಸಿದ್ದರರು. ಅವರಿಗೆ 100 ನಾಯಕರು ಇದ್ದರೆ ಸಾಕು, ಈ ಭಾರತಕ್ಕೆ ಸ್ವಾತಂತ್ರ್ಯ ನೀಡುವುದಲ್ಲದೇ, ಜಗತ್ತಿನಲ್ಲೇ ನಂಬರ್ ಒನ್ ದೇಶವನ್ನಾಗಿ ಮಾಡಬಹುದು ಎಂದು ನಂಬಿದ್ದರು. ನಾವೆಲ್ಲರೂ ಈ ಮಂತ್ರದೊಂದಿಗೆ ಮುಂದುವಿಯಬೇಕು ಎಂದರು.
ಇನ್ನು ಮುಂದಿನ ದಿನಗಳಲ್ಲಿ ಭಾತದ ಪ್ರಭಾವವೂ ಎಲ್ಲಾ ವಲಯಗಳಲ್ಲಿ ಅನೇಕ ಪಟ್ಟು ಅಧಿಕವಾಗುತ್ತದೆ. ಒಂದು ರೀತಿಯಲ್ಲಿ ಭಾರತದ ಸಂಪೂರ್ಣ ದೃಷ್ಟಿಕೋನ ಹಾಗೂ ವಿಷ್ಯವು ಬಲವಾದ ನಾಯಕತ್ವ ಪೀಳಿಗೆಯ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ತಿಳಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…