ದೇಶ- ವಿದೇಶ

ಆಗಸ್ಟ್ ತಿಂಗಳಿನಲ್ಲಿ ಪ್ರಧಾನಿ ಮೋದಿ ಚೀನಾಗೆ ಭೇಟಿ.?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ.

ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್.31ರಿಂದ ಸೆಪ್ಟೆಂಬರ್.1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲೇ ಮೋದಿ ಚೀನಾ ಪ್ರವಾಸ ವಿಶ್ವದ ಗಮನ ಸೆಳೆದಿದೆ.

ವಿದೇಶಾಂಗ ಸಚಿವ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಪ್ರಧಾನಿ ಮೋದಿ ಅವರು ಜಪಾನ್ ಮತ್ತು ನಂತರ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2020ರ ಗಾಲ್ವಾನ್ ಕಣಿವೆ ಘರ್ಷಣೆ ಬಳಿಕ ಕಹಿಯಾಗಿದ್ದ ಭಾರತ-ಚೀನಾ ನಡುವಿನ ಸಂಬಂಧ ಇದೀಗ ಸಿಹಿಯಾಗಲು ಪ್ರಾರಂಭವಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ ಅಂತ್ಯದಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‍ಗೆ ಭೇಟಿ ನೀಡಬಹುದು. ಇದರ ನಂತರ, ಪ್ರಧಾನಿ ಶಾಂಘೈ ಸಹಕಾರ ಸಂಸ್ಥೆನಲ್ಲಿ ಭಾಗವಹಿಸಲು ಚೀನಾಕ್ಕೂ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಮೋದಿ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷರು ಸೇರಿದಂತೆ ಇತರ ಎಸ್‍ಸಿಒ ನಾಯಕರನ್ನು ಸಹ ಭೇಟಿಯಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

41 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

10 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

10 hours ago